ಓಟದ ರಾಣಿ ಪಿ.ಟಿ.ಉಷಾ 
ಕ್ರೀಡೆ

'ನಾವು ಕ್ರೀಡಾ ವಿಭಾಗವನ್ನು ನಿರ್ಲಕ್ಷಿಸಲಾಗದು': ಆಥ್ಲೀಟ್ ಗಳಿಗೆ ಲಸಿಕೆ ನೀಡುವಂತೆ ಕೇರಳ ಸಿಎಂಗೆ ಪಿಟಿ ಉಷಾ ಮನವಿ

ಒಲಿಂಪಿಕ್ ಅರ್ಹತೆಗಾಗಿ ಇದೇ ತಿಂಗಳ 25 ರಿಂದ 29 ರವರೆಗೆ ನಡೆಯಲಿರುವ ರಾಷ್ಟ್ರೀಯ, ಅಂತರ್ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳುವ ರಾಜ್ಯದ ಆಥ್ಲೀಟ್ ಗಳಿಗೆ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಳಿ ಓಟದ ರಾಣಿ ಪಿ.ಟಿ.ಉಷಾ ಮನವಿ ಮಾಡಿದ್ದಾರೆ.

ನವದೆಹಲಿ:  ಒಲಿಂಪಿಕ್ ಅರ್ಹತೆಗಾಗಿ ಇದೇ ತಿಂಗಳ 25 ರಿಂದ 29 ರವರೆಗೆ ನಡೆಯಲಿರುವ ರಾಷ್ಟ್ರೀಯ, ಅಂತರ್ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳುವ ರಾಜ್ಯದ ಆಥ್ಲೀಟ್ ಗಳಿಗೆ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಳಿ ಓಟದ ರಾಣಿ ಪಿ.ಟಿ.ಉಷಾ ಮನವಿ ಮಾಡಿದ್ದಾರೆ.

ಲಸಿಕೆ ಪ್ರಕ್ರಿಯೆಯಲ್ಲಿ ಕ್ರೀಡಾಪಟುಗಳನ್ನು ನಿರ್ಲಕ್ಷಿಸಬಾರದು ಎಂದು 1986 ರ ಆವೃತ್ತಿಯಲ್ಲಿ ನಾಲ್ಕು ಬಂಗಾರ ಸೇರಿದಂತೆ ಏಷ್ಯಾನ್ ಗೇಮ್ಸ್ ನಲ್ಲಿ 11 ಪದಕಗಳನ್ನು ಜಯಿಸಿರುವ 56 ವರ್ಷದ ಪಿ.ಟಿ.ಉಷಾ ಹೇಳಿದ್ದಾರೆ.

ಮುಂಬರುವ ರಾಷ್ಟ್ರೀಯ, ಇನ್ನಿತರ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಲಿರುವ ಕ್ರೀಡಾಪಟುಗಳು, ಅವರ ತರಬೇತುದಾರರು, ಕ್ರೀಡಾ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ಹಾಕುವಂತೆ ಕೇರಳ ಮುಖ್ಯಮಂತ್ರಿ ಬಳಿ ವಿನಮ್ರತೆಯಿಂದ ಮನವಿ ಮಾಡುವುದಾಗಿ ಅವರು ಟ್ವಿಟ್ ಮಾಡಿದ್ದಾರೆ. ಕ್ರೀಡಾ ಕ್ಷೇತ್ರವನ್ನು ನಾವು ನಿರ್ಲಕ್ಷಿಸಲಾಗದು ಎಂದಿದ್ದಾರೆ.

ಪಾಟಿಯಾಲದಲ್ಲಿ ರಾಷ್ಟ್ರೀಯ, ಅಂತರ್ ರಾಜ್ಯ ಚಾಂಪಿಯನ್ ಶಿಪ್ ನಡೆಯಲಿದ್ದು, ಇದು ಟೊಕಿಯೊ ಒಲಿಂಪಿಕ್ಸ್ ಅರ್ಹತೆಗಾಗಿ ಭಾರತೀಯ ಆಥ್ಲೀಟ್ ಗಳಿಗೆ ಕೊನೆಯ ಅವಕಾಶವಾಗಿದೆ. ಆಥ್ಲೀಟ್ ಗಳಿಗೆ  ಒಲಿಂಪಿಕ್ ಗೆ ಅರ್ಹತೆ ಪಡೆಯಲು ಜೂನ್ 29 ಕೊನೆಯ ದಿನವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT