ನಿರ್ಮಲ್ ಕೌರ್ ಮತ್ತು ಮಿಲ್ಖಾ ಸಿಂಗ್ 
ಕ್ರೀಡೆ

ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವು

ಫ್ಲೈಯಿಂಗ್ ಸಿಖ್ ಖ್ಯಾತಿಯಾ ಅಥ್ವೀಟ್ ಮಿಲ್ಖಾ ಸಿಂಗ್ ಅವರ ಪತ್ನಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಕೋವಿಡ್-19 ಸೋಂಕಿನಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮೊಹಾಲಿ: ಫ್ಲೈಯಿಂಗ್ ಸಿಖ್ ಖ್ಯಾತಿಯಾ ಅಥ್ವೀಟ್ ಮಿಲ್ಖಾ ಸಿಂಗ್ ಅವರ ಪತ್ನಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಕೋವಿಡ್-19 ಸೋಂಕಿನಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರನ್ನು ಇತ್ತೀಚೆಗೆ ಮೊಹಾಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವ್ನಪ್ಪಿದ್ದಾರೆ. ನಿರ್ಮಲ್ ಕೌರ್ ಅವರು, ಪತಿ ಮಿಲ್ಖಾ ಸಿಂಗ್, ಒಬ್ಬ ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 

ನಿನ್ನೆ ಸಂಜೆಯೇ ನಿರ್ಮಲ್ ಅವರ ಅಂತ್ಯಕ್ರಿಯೆ ನಡೆದಿದ್ದು, ಅಂತ್ಯಕ್ರಿಯೆಯನ್ನು ಅವರ ಕುಟುಂಬಸ್ಥರು ನೆರವೇರಿಸಿದ್ದಾರೆ. ಆದರೆ ಪತಿ ಮಿಲ್ಖಾ ಸಿಂಗ್ ಅವರು ಕೋವಿಡ್ ನಿಂದಾಗಿ ಐಸಿಯು ಯಲ್ಲಿರುವುದರಿಂದ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.

ನಿರ್ಮಲ್ ಕೌರ್ ನಿಧನ ವಿಚಾರವನ್ನು ಮಿಲ್ಖಾ ಕುಟುಂಬದ ವಕ್ತಾರರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ''ನಿನ್ನೆ ಸಂಜೆ 4 ಗಂಟೆಗೆ ಕೊರೊನಾ ವಿರುದ್ಧದ ಹೋರಾಟದ ನಂತರ ಶ್ರೀಮತಿ ನಿರ್ಮಲ್ ಮಿಲ್ಖಾ ಸಿಂಗ್ ನಿಧನರಾದರು ಎಂದು ನಿಮಗೆ ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ. ಅವರು ಮಿಲ್ಖಾ  ಕುಟುಂಬದ ಬೆನ್ನೆಲುಬು, ಅವರಿಗೆ 85 ವರ್ಷ. ಫ್ಲೈಯಿಂಗ್ ಸಿಖ್ ಮಿಲ್ಖಾ ಸಿಂಗ್ ಅವರು ಐಸಿಯುನಲ್ಲಿ (ಚಂಡೀಗಡದ ಪಿಜಿಐಎಂಆರ್) ಸ್ವತಃ ಇರುವುದರಿಂದ ಇಂದು ಸಂಜೆ ನಡೆಸಿದ ಶವ ಸಂಸ್ಕಾರಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂಬುದು ದುರಂತ."ಎಂದು ಹೇಳಿದರು.

ಕೋವಿಡ್-19 ನ್ಯುಮೋನಿಯಾದಿಂದ ಮಿಲ್ಖಾ ಅವರನ್ನು ಅದೇ ಸೌಲಭ್ಯಕ್ಕೆ ದಾಖಲಿಸಿದ ಎರಡು ದಿನಗಳ ನಂತರ ಮೇ 26 ರಂದು ನಿರ್ಮಲ್ ಅವರನ್ನು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ಕರೆತರಲಾಯಿತು.ಒಂದು ವಾರದ ನಂತರ ಕುಟುಂಬದ ಕೋರಿಕೆಯ ಮೇರೆಗೆ ಮಿಲ್ಖಾ ಅವರನ್ನು ಬಿಡುಗಡೆ  ಮಾಡಲಾಯಿತು, ಆದರೆ ಭೀಕರ ಸೋಂಕಿನೊಂದಿಗೆ ಹೋರಾಡಿ ನಿರ್ಮಲ್ ಆಸ್ಪತ್ರೆಯಲ್ಲಿಯೇ ಇದ್ದರು. ನಂತರ ಮಿಲ್ಖಾ ಅವರನ್ನು ಇಲ್ಲಿ ಪಿಜಿಐಎಂಆರ್‌ನ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸೇರಿಸಲಾಯಿತು ಮತ್ತು ಅವರು ಪ್ರಸ್ತುತ ಮಿಲ್ಖಾ ಸಿಂಗ್ ಆರೋಗ್ಯ ಸ್ಥಿರವಾಗಿದ್ದು ಮತ್ತು ಸುಧಾರಿಸುತ್ತಿದ್ದಾರೆ" ಎಂದು ಆಸ್ಪತ್ರೆ  ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT