ಸುಶೀಲ್ ಕುಮಾರ್ 
ಕ್ರೀಡೆ

ರೆಜ್ಲರ್‌ ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ಜೂಡೋ ಕೊಚ್ ಬಂಧನ

ಜೂನಿಯರ್‌ ರೆಜ್ಲರ್‌ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನವದೆಹಲಿ: ಜೂನಿಯರ್‌ ರೆಜ್ಲರ್‌ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಒಲಿಂಪಿಯನ್ ಸುಶೀಲ್ ಕುಮಾರ್ ಅವರಿಗೆ ಸುಭಾಷ್‌ ಜೂಡೋ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್, ಆತನ ಹಲವು ಸಹಚರರು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಇತ್ತೀಚೆಗೆ ಸುಶೀಲ್‌ ಕುಮಾರ್‌ ಅವರ ಕಸ್ಟಡಿಯನ್ನು ಜೂನ್‌ 25ರವರೆಗೆ ವಿಸ್ತರಿಸಿ ದೆಹಲಿ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ರೀಟಾ ಜೈನ್ ಆದೇಶಿಸಿದ್ದರು. ಒಂಬತ್ತು ದಿನಗಳ ಕಸ್ಟಡಿ ಮುಗಿದ ನಂತರ ಪೊಲೀಸರು ಸುಶೀಲ್ ಕುಮಾರ್‌ ಅವರನ್ನು ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದಾಗ, ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿ ಆದೇಶಿಸಿದ್ದರು. ಸಾಗರ್‌ ರಾಣಾ ಹತ್ಯೆಗೆ ಸಂಬಂಧಿಸಿದಂತೆ ಸುಶೀಲ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಪೊಲೀಸರು ಈವರೆಗೆ ಬಂಧಿಸಿದ್ದಾರೆ. 

ಕಳೆದ ಮೇ 4 ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕಿರಿಯ ಕುಸ್ತಿಪಟುವನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಸುಶೀಲ್ ಹಾಗೂ ಸಾಗರ್ ನಡುವಣ ನಡೆದ ಘರ್ಷಣೆಯಲ್ಲಿ ಸಾಗರ್ ನನ್ನು ಕೊಲೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT