ಸುಶೀಲ್ ಕುಮಾರ್ 
ಕ್ರೀಡೆ

ರೆಜ್ಲರ್‌ ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ಜೂಡೋ ಕೊಚ್ ಬಂಧನ

ಜೂನಿಯರ್‌ ರೆಜ್ಲರ್‌ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನವದೆಹಲಿ: ಜೂನಿಯರ್‌ ರೆಜ್ಲರ್‌ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಒಲಿಂಪಿಯನ್ ಸುಶೀಲ್ ಕುಮಾರ್ ಅವರಿಗೆ ಸುಭಾಷ್‌ ಜೂಡೋ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್, ಆತನ ಹಲವು ಸಹಚರರು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಇತ್ತೀಚೆಗೆ ಸುಶೀಲ್‌ ಕುಮಾರ್‌ ಅವರ ಕಸ್ಟಡಿಯನ್ನು ಜೂನ್‌ 25ರವರೆಗೆ ವಿಸ್ತರಿಸಿ ದೆಹಲಿ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ರೀಟಾ ಜೈನ್ ಆದೇಶಿಸಿದ್ದರು. ಒಂಬತ್ತು ದಿನಗಳ ಕಸ್ಟಡಿ ಮುಗಿದ ನಂತರ ಪೊಲೀಸರು ಸುಶೀಲ್ ಕುಮಾರ್‌ ಅವರನ್ನು ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದಾಗ, ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿ ಆದೇಶಿಸಿದ್ದರು. ಸಾಗರ್‌ ರಾಣಾ ಹತ್ಯೆಗೆ ಸಂಬಂಧಿಸಿದಂತೆ ಸುಶೀಲ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಪೊಲೀಸರು ಈವರೆಗೆ ಬಂಧಿಸಿದ್ದಾರೆ. 

ಕಳೆದ ಮೇ 4 ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕಿರಿಯ ಕುಸ್ತಿಪಟುವನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಸುಶೀಲ್ ಹಾಗೂ ಸಾಗರ್ ನಡುವಣ ನಡೆದ ಘರ್ಷಣೆಯಲ್ಲಿ ಸಾಗರ್ ನನ್ನು ಕೊಲೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!