ಸುಶೀಲ್ ಕುಮಾರ್ 
ಕ್ರೀಡೆ

ಸುಶೀಲ್ ಕುಮಾರ್ ವಿರುದ್ಧದ ಆರೋಪಗಳಿಂದ ಭಾರತೀಯ ಕುಸ್ತಿಯ ಹೆಸರಿಗೆ ಕಳಂಕ: ಡಬ್ಲ್ಯುಎಫ್ಐ

ಖ್ಯಾತ ಕುಸ್ತಿ ಪಟು ಸುಶೀಲ್ ಕುಮಾರ್ ವಿರುದ್ಧದ ಆರೋಪಗಳಿಂದ ಭಾರತೀಯ ಕುಸ್ತಿಯ ಹೆಸರಿಗೆ ಕಳಂಕ ಅಂಟಿಕೊಂಡಿದೆ ಎಂದು ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಹೇಳಿದೆ. 

ನವದೆಹಲಿ: ಖ್ಯಾತ ಕುಸ್ತಿ ಪಟು ಸುಶೀಲ್ ಕುಮಾರ್ ವಿರುದ್ಧದ ಆರೋಪಗಳಿಂದ ಭಾರತೀಯ ಕುಸ್ತಿಯ ಹೆಸರಿಗೆ ಕಳಂಕ ಅಂಟಿಕೊಂಡಿದೆ ಎಂದು ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಹೇಳಿದೆ. 

"ಸುಶೀಲ್ ಕುಮಾರ್ ತಮ್ಮ ಅಭೂತಪೂರ್ವ ಸಾಧನೆಗಳಿಂದ ಕುಸ್ತಿ ಕ್ಷೇತ್ರದ ಖ್ಯಾತಿಯನ್ನು ಗಗನದೆತ್ತರಕ್ಕೆ ಕೊಂಡೊಯ್ದಿದ್ದರು. ಆದರೆ ಅವರನ್ನು ಪೊಲೀಸರು ಹತ್ಯೆ ಪ್ರಕರಣವೊಂದರಲ್ಲಿ ಹುಡುಕುತ್ತಿದ್ದು, ಕ್ರೀಡೆಯ ಗೌರವಕ್ಕೆ ಕಳಂಕ ಬಂದಂತಾಗಿದೆ" ಎಂದು ಡಬ್ಲ್ಯುಎಫ್ಐ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಹೇಳಿದ್ದಾರೆ.  

ಸುಶೀಲ್ ಅವರ ಅಂತಾರಾಷ್ಟ್ರೀಯ ಮಟ್ಟದ ಸಾಧನೆ, ಯಶಸ್ಸು, ಕುಸ್ತಿಯೆಡೆಗೆ ಪ್ರೇರಣಾದಾಯಿಯಾಗಿತ್ತು. ಈ ಮೂಲಕ ಕುಸ್ತಿ ಕ್ಷೇತ್ರದಲ್ಲಿ ಕ್ರಾಂತಿ ಉಂಟಾಗಿತ್ತು. 

ಒಲಂಪಿಕ್ಸ್ ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಎರಡು ಪದಕಗಳನ್ನು ಗೆದ್ದ ಏಕೈಕ ಕುಸ್ತಿ ಕ್ರೀಡಾಪಟು ಸುಶೀಲ್ ಆಗಿದ್ದಾರೆ. ಸುನಿಲ್ ಅವರು ಬೆಳೆಸಿದ್ದ ಕುಸ್ತಿ ಗೌರವ ಇಂದು ಅವರಿಂದಲೇ ನಾಶವಾಗಿದೆ ಎಂದು ಡಬ್ಲ್ಯುಎಫ್ಐ ಹೇಳಿದೆ. 

ಹತ್ಯೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಅವರನ್ನು ಪೊಲೀಸರು ಹುಡುಕುತ್ತಿರುವುದರಿಂದ ಭಾರತೀಯ ಕುಸ್ತಿಯ ಹೆಸರಿಗೆ ಕಳಂಕ ಅಂಟಿಕೊಂಡಂತಾಗಿದೆ. ಆದರೆ ಇದಕ್ಕೂ ಕುಸ್ತಿಪಟುಗಳಿಗೂ ಸಂಬಂಧವಿಲ್ಲ. ಇದು ವೈಯಕ್ತಿಕ ವಿಚಾರವಾಗಿದ್ದು, ಕುಸ್ತಿ ಪಟುಗಳ ಪ್ರದರ್ಶನದ ಮೇಲೆಯಷ್ಟೇ ನಮ್ಮ ಕಾಳಜಿ ಎಂದು ಡಬ್ಲ್ಯುಎಫ್ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಹೇಳಿದ್ದಾರೆ. 

2008 ರಲ್ಲಿ ಬೀಜಿಂಗ್ ಒಲಂಪಿಕ್ಸ್ ನಲ್ಲಿ ಸುಶೀಲ್ ಕುಮಾರ್ ಕಂಚಿನ ಪದಕ ಗೆದ್ದು ಭಾರತದ 56 ವರ್ಷಗಳ ಸುದೀರ್ಘ ನಿರೀಕ್ಷೆಯನ್ನು ನನಸಾಗಿಸಿದ್ದರು. 

ಇದನ್ನೇ ಸ್ಪೂರ್ತಿಯಾಗಿ ಪಡೆದು, ಯೋಗೇಶ್ವರ್ ದತ್, ಗೀತಾ, ಬಬಿತಾ ಫೋಗಟ್, ವಿನೀಶ್, ರಿಯೋ ಬ್ರಾಂಜ್ ಪದಕ ವಿಜೇತರಾದ ಸಾಕ್ಷಿ ಮಲೀಕ್ ಸೇರಿದಂತೆ ಹಲವರು ಕುಸ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. 

ಮೇ.04 ರಂದು ನಡೆದ ಬಡಿದಾಟ ಅದರ ಪರಿಣಾಮ 23 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ. ಇದರಲ್ಲಿ ಸುಶೀಲ್ ಕುಮಾರ್ ಅವರ ಕೈವಾಡವೂ ಇದೆ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!