ಕಿರಣ್ ರಿಜಿಜು 
ಕ್ರೀಡೆ

ಇತರ ದೇಶಗಳ ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಬೇಡಿ: ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು

ತರಬೇತಿ ಅಥವಾ ಸ್ಪರ್ಧೆಗಾಗಿ ಪ್ರಯಾಣಿಸುವಾಗ ವಿದೇಶಗಳ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬೇಡಿ ಎಂದು ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು....

ನವದೆಹಲಿ: ತರಬೇತಿ ಅಥವಾ ಸ್ಪರ್ಧೆಗಾಗಿ ಪ್ರಯಾಣಿಸುವಾಗ ವಿದೇಶಗಳ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬೇಡಿ ಎಂದು ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.

ಕ್ರೊಯೇಷಿಯಾ ಒಲಿಂಪಿಕ್‌ಗೆ ತೆರಳುತ್ತಿರುವ ಶೂಟರ್‌ಗಳಿಗೆ ಶುಭ ಕೋರಿರುವ ಕಿರಣ್ ರಿಜಿಜು ಅವರು, "ಪ್ರಯಾಣ ಸುರಕ್ಷಿತವಾಗಿರಲಿ! ಇತರ ದೇಶಗಳ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಎಂದಿಗೂ ಉಲ್ಲಂಘಿಸಬೇಡಿ. ತರಬೇತಿಯತ್ತ ಗಮನಹರಿಸಿ, ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ. ನಮ್ಮ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲಾಗುವುದು. ಆಲ್ ದಿ ಬೆಸ್ಟ್" ಎಂದು ಕೇಂದ್ರ ಸಚಿವ ಟ್ವೀಟ್ ಮಾಡಿದ್ದಾರೆ.

ಎಎಫ್ ಸಿ ಕಪ್ ಪ್ಲೇ ಆಫ್ ಹಂತದ ಪಂದ್ಯ ಆಡಲು ಮಾಲ್ಡಿವ್ಸ್ ನ ಮಾಲಿಗೆ ತೆರಳಿದ್ದ ಬೆಂಗಳೂರು ಎಫ್ ಸಿ ತಂಡ ಕೋಡಿವ್ ನಿಯಮಾವಳಿಗಳನ್ನು ಪಾಲಿಸದ ಕಾರಣ ತಂಡದ ಆತಿಥ್ಯ ವಹಿಸಲು ಸಾಧ್ಯವಿಲ್ಲ ಎಂದು ಮಾಲ್ಡಿವ್ಸ್ ಕ್ರೀಡಾ ಸಚಿವರು ಹೇಳಿದ್ದರು. ಬೆಂಗಳೂರು ತಂಡ ಕ್ಷಮೆಯಾಚಿಸಬೇಕಾಗಿ ಬಂದ ನಂತರ ಕಿರಣ್ ರಿಜಿಜು ಈ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಎಫ್ ಸಿ ತಂಡ ಇಬ್ಬರು ಆಟಗಾರರು ಮತ್ತು ತಂಡದ ಸಹಾಯಕ ಸಿಬ್ಬಂದಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಮಾಲೆ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿರುವ ಚಿತ್ರ ತೆಗೆದ ನಂತರ ಮಾಲ್ಡೀವ್ಸ್ ಕ್ರೀಡಾ ಸಚಿವ ಅಹ್ಮದ್ ಮಹ್ಲೂಫ್ ಅವರು ದ್ವೀಪ ರಾಷ್ಟ್ರದಿಂದ ಹೊರಹೋಗುವಂತೆ ಬೆಂಗಳೂರು ತಂಡಕ್ಕೆ ಸೂಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT