ವಿ ಚಂದ್ರಶೇಖರ್ 
ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಟೇಬಲ್ ಟೆನ್ನಿಸ್ ತಾರೆ ವಿ.ಚಂದ್ರಶೇಖರ್ ಕೊರೋನಾ ಸೋಂಕಿನಿಂದ ನಿಧನ

ಮೂರು ಬಾರಿ ರಾಷ್ಟ್ರೀಯ ಟೇಬಲ್ ಟೆನ್ನಿಸ್ ಚಾಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ವಿ.ಚಂದ್ರಶೇಖರ್ ಚೆನ್ನೈನಲ್ಲಿ ಕೊರೋನಾ ಸೋಂಕಿನಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಚೆನ್ನೈ: ಮೂರು ಬಾರಿ ರಾಷ್ಟ್ರೀಯ ಟೇಬಲ್ ಟೆನ್ನಿಸ್ ಚಾಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ವಿ.ಚಂದ್ರಶೇಖರ್ ಚೆನ್ನೈನಲ್ಲಿ ಕೊರೋನಾ ಸೋಂಕಿನಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ ಮತ್ತು ಮಗ ಇದ್ದಾರೆ.

ಟಿಟಿ ನಲ್ಲಿ 'ಚಂದ್ರ' ಎಂದು ಜನಪ್ರಿಯವಾಗಿ ಕರೆಯಲ್ಪಟ್ಟ ಚಂದ್ರಶೇಖರ್ ಕೊರೋನಾಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅವರು ತಮಿಳಿಗ  ಟೇಬಲ್ ಟೆನ್ನಿಸ್ ಸಂಘದ ಅಧ್ಯಕ್ಷರಾಗಿದ್ದರು. ಅವರು ಎಸ್‌ಡಿಎಟಿ-ಮೆಡಿಮಿಕ್ಸ್ ಟಿಟಿಯ ನಿರ್ದೇಶಕರು ಮತ್ತು ಮುಖ್ಯ ತರಬೇತುದಾರರಾಗಿದ್ದರು.

1982 ರಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ತಲುಪಿದ ಚಂದ್ರಶೇಖರ್ ತರಬೇತುದಾರರಾಗಿ ಸಹ ಯಶಸ್ವಿಯಾಗಿದ್ದರು.

1984 ರಲ್ಲಿ ಅವರು ಬಲ ಮೊಣಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಅವರ ಕ್ರೀಡಾ ಬದುಕು ಮೊಟಕಾಗಿತ್ತು. ಆದಾಗ್ಯೂ, ಅವರು  ಯಶಸ್ವಿ ತರಬೇತುದಾರನಾಗಿ ಹೊರಹೊಮ್ಮಿದ್ದರು. ಟೇಬಲ್ ಟೆನ್ನಿಸ್ ಜಗತ್ತು ಅಗಲಿದ ಕ್ರೀಡಾ ತಾರೆಗೆ ಸಂತಾಪ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT