ಕುಸ್ತಿಪಟು ಸುಶೀಲ್ ಕುಮಾರ್ 
ಕ್ರೀಡೆ

ಹತ್ಯೆ ಪ್ರಕರಣ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ 

23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರ ಹತ್ಯೆಗೆ ಸಂಬಂಧಿಸಿದಂತೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ನವದೆಹಲಿ: 23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರ ಹತ್ಯೆಗೆ ಸಂಬಂಧಿಸಿದಂತೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಇದಕ್ಕೆ ಮುನ್ನ ದೆಹಲಿ ಪೊಲೀಸರುಕುಸ್ತಿಪಟು ವಿರುದ್ಧ ಲುಕ್ ಔಟ್ ಸರ್ಕ್ಯುಲರ್ (ಎಲ್‌ಒಸಿ) ಹೊರಡಿಸಿದ್ದರು. ಸುಶೀಲ್ ಕುಮಾರ್ ಬಂಧನಕ್ಕೆ ಬಹುಮಾನ ಘೋಷಿಸಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಶೀಲ್ ಕುಮಾರ್ ವಿರುದ್ಧ ಎನ್‌ಬಿಡಬ್ಲ್ಯೂ ನೀಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಮತ್ತು ತಮ್ಮ ಅರ್ಜಿಯನ್ನು ಅವರು ಅಂಗೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ದೆಹಲಿ ಸರ್ಕಾರಕ್ಕೂ ಪತ್ರವೊಂದನ್ನು ಕಳುಹಿಸಿದ್ದೇವೆ,ಸುಶೀಲ್ ಕುಮಾರ್ ಮತ್ತು ಅವರ ಸಹವರ್ತಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಅಜಯ್ ಕುಮಾರ್ ಅವರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬೇಕು ”ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಎಫ್ಐಆರ್ ನೋಂದಾಯಿಸಿದ ನಂತರ, ನಾವು ಅವರಿಗೆ ನೋಟಿಸ್ ನೀಡಿದ್ದೇವೆ, ಆದರೆ ಅವರು ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡದ್ದಾರೆ.  ಅಂದಿನಿಂದ ಅವರ ಪತ್ತೆಯಾಗಿಲ್ಲ.. ನಾವು ಅವರ ಸ್ನೇಹಿತರ ನಿವಾಸಗಳಲ್ಲಿ ಶೋಧ ನಡೆಸಿದ್ದೇವೆ ಮತ್ತು ಈಗ ಆತನ ಬಂಧನಕ್ಕೆ ಅನುಕೂಲವಾಗಲು ಮಾಹಿತಿ ನೀಡಿದವರಿಗೆ ಬಹುಮಾನವನ್ನು ಘೋಷಿಸಲು ನಿರ್ಧರಿಸಿದ್ದೇವೆ. ”ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹತ್ರಾಸಲ್ ಸ್ಟೇಡಿಯಂ ಪಾರ್ಕಿಂಗ್ ಪ್ರದೇಶದಲ್ಲಿ ಜಗಳವಾಡುವಾಗ ಸಾಗರ್ ರಾಣಾ ಅವರನ್ನು ಥಳಿಸಲಾಯಿತು. ಘಟನೆಯ ನಂತರ ಸುಶೀಲ್ ಕುಮಾರ್ ವಿರುದ್ಧ ಕೊಲೆ, ಅಪಹರಣ ಮತ್ತು ಕ್ರಿಮಿನಲ್ ಪಿತೂರಿಯ ಎಫ್ಐಆರ್ ದಾಖಲಿಸಲಾಗಿದೆ.

ಮೇ 4 ರಂದು 97 ಕೆಜಿ ಗ್ರೀಕೋ-ರೋಮನ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಸಾಗರ್ ರಾಣಾ ಅವರನ್ನು ಎರಡು ಗುಂಪುಗಳು ಒಳಗೊಂಡ ಘರ್ಷಣೆಯಲ್ಲಿ ಹೊಡೆದು ಸಾಯಿಸಲಾಯಿತು. ರಾಣಾ ಮಾಜಿ ಕಿರಿಯ ರಾಷ್ಟ್ರೀಯ ಚಾಂಪಿಯನ್ ಮತ್ತು ಹಿರಿಯ ರಾಷ್ಟ್ರೀಯ ಶಿಬಿರದದಲ್ಲಿ ಭಾಗವಹಿಸಿದ್ದರು.. "ಕ್ರೀಡಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಸುಶೀಲ್ ಕುಮಾರ್, ಅಜಯ್, ಪ್ರಿನ್ಸ್ ದಲಾಲ್, ಸೋನು, ಸಾಗರ್, ಅಮಿತ್ ಮತ್ತು ಇತರರ ನಡುವೆ ಜಗಳ ನಡೆದಿದೆ ಎಂದು ತನಿಖೆಯ ಸಮಯದಲ್ಲಿ ನಾವು ಕಂಡುಕೊಂಡಿದ್ದೇವೆ" ಎಂದು ಪೋಲೀಸರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT