ಟೋಕಿಯೊ ಗವರ್ನರ್ ಗೆ ಸಲ್ಲಿಸಲಾಗಿರುವ ಅರ್ಜಿ 
ಕ್ರೀಡೆ

2020 ಒಲಿಂಪಿಕ್ಸ್ ರದ್ದತಿಗಾಗಿ ಟೋಕಿಯೊ ಗವರ್ನರ್ ಗೆ ಅರ್ಜಿ!

ಟೋಕಿಯೊ ಒಲಿಂಪಿಕ್ಸ್ 2020 ರದ್ದತಿಗೆ ಸಂಬಂಧಿಸಿದಂತೆ ಮೂರು ಲಕ್ಷ 51 ಸಾವಿರ ಜನರ ಸಹಿಯುಳ್ಳ ಆನ್ ಲೈನ್ ಅರ್ಜಿಯನ್ನು  ಟೋಕಿಯೊ ಗವರ್ನರ್ ಯೂರಿಕೊ ಕೊಯಿಕೆ ಅವರಿಗೆ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಸಮಿತಿಗಳ ಮುಖ್ಯಸ್ಥರಿಗೂ  ಕಳುಹಿಸಲಾಗಿದೆ.

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ 2020 ರದ್ದತಿಗೆ ಸಂಬಂಧಿಸಿದಂತೆ ಮೂರು ಲಕ್ಷ 51 ಸಾವಿರ ಜನರ ಸಹಿಯುಳ್ಳ ಆನ್ ಲೈನ್ ಅರ್ಜಿಯನ್ನು  ಟೋಕಿಯೊ ಗವರ್ನರ್ ಯೂರಿಕೊ ಕೊಯಿಕೆ ಅವರಿಗೆ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಸಮಿತಿಗಳ ಮುಖ್ಯಸ್ಥರಿಗೂ  ಕಳುಹಿಸಲಾಗಿದೆ.

ಟೋಕಿಯೊ ಒಲಿಂಪಿಕ್ ಕ್ರೀಡಾಕೂಟವನ್ನು ರದ್ದುಗೊಳಿಸಬೇಕೆಂಬ ಜನರು ಕೊರೋನಾ ಸಾಂಕ್ರಾಮಿಕ ಯುಗದಲ್ಲಿ ಕ್ರೀಡಾ ಕೂಟವನ್ನು ಆಯೋಜಿಸುವ ಬದಲು ಜೀವ ಉಳಿಸಲು ಆದ್ಯತೆ ನೀಡುವಂತೆ ಒಲಿಂಪಿಕ್ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ರಾಜ್ಯಪಾಲ ಯೂರಿಕೊ ಕೊಯಿಕೆ ಅವರು ಒಲಿಂಪಿಕ್ ಕ್ರೀಡಾಕೂಟದ ವಿರುದ್ಧ ನಡೆಯುತ್ತಿರುವ ಅಭಿಯಾನದ ಬಗ್ಗೆ, ಅವರು ಸುರಕ್ಷಿತ ಒಲಿಂಪಿಕ್ಸ್ ಆಯೋಜನೆಯತ್ತ ಕೆಲಸ ಮಾಡುವುದಾಗಿ ಹೇಳಿದರು.

ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದರೂ, ಕ್ರೀಡಾಕೂಟಕ್ಕೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಬೆಂಬಲಕ್ಕಾಗಿ ಸಂಘಟಕರು ಕಾಯುತ್ತಿದ್ದಾರೆ ಎಂದು ಜಪಾನ್ ನ ಆರ್ಥಿಕ ಸಚಿವ ಯಸುತೋಶಿ ನಿಶಿಮುರಾ ಹೇಳಿದ್ದಾರೆ.ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚುತ್ತದೆ ಎಂದು ಅನೇಕ ಜನರು  ಚಿಂತಿತರಾಗಿದ್ದಾರೆಂದು ನನಗೆ ತಿಳಿದಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರ್ಧಾರವನ್ನು ಆಧರಿಸಿ ಟೋಕಿಯೊ ಒಲಿಂಪಿಕ್ಸ್ 2020  ಆಯೋಜಿಸಲು ಸಂಘಟಕರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. 

ಶುಕ್ರವಾರ ಹೊಕ್ಕೈಡೋ ಪ್ರಾಂತ್ಯ ಸೇರಿದಂತೆ ಮೂರು  ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT