ಸುಶೀಲ್ ಕುಮಾರ್ 
ಕ್ರೀಡೆ

ಕೊಲೆ ಪ್ರಕರಣ: ಸ್ಪೆಷಲ್ ಸೆಲ್ ಅಧಿಕಾರಿಗಳಿಂದ ರೆಸ್ಲರ್ ಸುಶೀಲ್ ಕುಮಾರ್ ಬಂಧನ; ದೆಹಲಿ ಪೊಲೀಸರು

ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಎದುರಿಸುತ್ತಿರುವ ರೆಸ್ಲರ್ ಸುಶೀಲ್ ಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದ ದೆಹಲಿ ಪೊಲೀಸರು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ಹೇಳಿದ್ದಾರೆ.

ನವದೆಹಲಿ: ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಎದುರಿಸುತ್ತಿರುವ ರೆಸ್ಲರ್ ಸುಶೀಲ್ ಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದ ದೆಹಲಿ ಪೊಲೀಸರು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ಹೇಳಿದ್ದಾರೆ.

ನಿನ್ನೆ ದೆಹಲಿ ಪೊಲೀಸರು ಸುಶೀಲ್ ಕುಮಾರ್ ರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಸುಶೀಲ್ ಕುಮಾರ್ ಅವರನ್ನು ಬಂಧಿಸಿರಲಿಲ್ಲ. ದೆಹಲಿ ಪೊಲೀಸರ ಒಂದು ತಂಡ ಪಂಜಾಬ್ ನಲ್ಲಿ ಬೀಡುಬಿಟ್ಟಿದ್ದು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ ಎಂದು ಹೇಳಿದ್ದಾರೆ. 

ಇಂದು ಅಧಿಕೃತ ಬಂಧನ
ಇನ್ನು ಸುಶೀಲ್ ಕುಮಾರ್ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಸೆಲ್ ಅಧಿಕಾರಿಗಳು ಮಾಹಿತಿ ನೀಡಿದ್ದು, ವಿಶೇಷ ಸೆಲ್ ಅಧಿಕಾರಿ ನೀರಜ್ ಕುಮಾರ್ ಅವರ ತಂಡ ಸುಶೀಲ್ ಕುಮಾರ್ ಅವರನ್ನು ಬಂಧಿಸಿದೆ ಎಂದು ಸ್ಪಷ್ಟನೆ ನೀಡಿದೆ.

ಇನ್ಸ್‌ಪೆಕ್ಟರ್ ಶಿವಕುಮಾರ್, ಇನ್ಸ್‌ಪೆಕ್ಟರ್ ಕರಂಬೀರ್ ನೇತೃತ್ವದ ವಿಶೇಷ ಸೆಲ್ ಎಸ್‌ಆರ್ ತಂಡ ಮತ್ತು ಎಸಿಪಿ ಅತ್ತಾರ್ ಸಿಂಗ್ ಅವರ ಮೇಲ್ವಿಚಾರಣೆಯಲ್ಲಿ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಶೀಲ್ ಕುಮಾರ್ ಮತ್ತು ಅಜಯ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದೆ

ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಸಾಗರ್ ರಾಣಾ ಕೊಲೆಯಾಗಿದ್ದರು. ಸುಶೀಲ್ ಹಾಗೂ ಸಾಗರ್ ನಡುವಣ ಘರ್ಷಣೆಯಲ್ಲಿ ಸಾಗರ್ ಹತ್ಯೆಗೀಡಾಗಿದ್ದ ಎಂದು ಹೇಳಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ರನ್ನು ಬಂಧಿಸಲು ಪೊಲೀಸರು ತೀವ್ರ ಪ್ರಯತ್ನ ನಡೆಸಿದ್ದರು. ಕುಸ್ತಿಪಟು ಸುಶೀಲ್ ಕುಮಾರ್ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ, ಆತನ ಸಹಚರ ಅಜಯ್ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ ಬಹುಮಾನ ಕೂಡ ಘೋಷಿಸಿದ್ದರು.

ಮತ್ತೊಂದು ಕಡೆ ಕಳೆದ ವಾರ ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ರೋಹಿಣಿ ನ್ಯಾಯಾಲಯ ವಜಾಗೊಳಿಸಿತ್ತು. ತಲೆಮರೆಸಿಕೊಂಡಿದ್ದ ಸುಶೀಲ್ ಎರಡು ದಿನಗಳ ಹಿಂದೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಮೀರತ್ ಟೋಲ್ ಪ್ಲಾಜಾದಲ್ಲಿದ್ದ ಕ್ಯಾಮೆರಾಗಳು ಸೆರೆ ಹಿಡಿದಿದ್ದವು, ಈ ಪೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಇದರ ಆಧಾರದ ಮೇಲೆ ದೆಹಲಿ ಪೊಲೀಸರು ಸುಶೀಲ್ ಅವರ ಶೋಧನೆ ಮುಂದುವರೆಸಿ, ಪಂಜಾಬ್ ಗೆ ತೆರಳಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT