ಸುಶೀಲ್ ಕುಮಾರ್ 
ಕ್ರೀಡೆ

ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.

ನವದೆಹಲಿ: ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.

ಪೊಲೀಸರು ಇನ್ನೂ ಏಳು ದಿನಗಳ ನೀಡುವಂತೆ ಕೋರಿದ್ದರು. ನ್ಯಾಯಾಧೀಶ ಮಾಯಾಂಕ್ ಗೋಯಲ್ ಉಲ್ಲೇಖಿಸಿ, "ನ್ಯಾಯದ ಹಿತದೃಷ್ಟಿಯಿಂದ, ಪೊಲೀಸರಿಗೆ ಇನ್ನೂ ನಾಲ್ಕು ದಿನಗಳ ಕಸ್ಟಡಿ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ. 

ಮೇ 4 ರ ರಾತ್ರಿ ನಡೆದ ಘಟನೆಯ ನಂತರ 38 ವರ್ಷದ ಕುಸ್ತಿಪಟು ಸುಶೀಲ್ ಪರಾರಿಯಾಗಿದ್ದ. ಅವರನ್ನು ಮೇ 23 ರ ಬೆಳಿಗ್ಗೆ ರಾಜಧಾನಿಯ ಮುಂಡ್ಕಾ ಪ್ರದೇಶದಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ರೋಹಿಣಿ ನ್ಯಾಯಾಲಯವು ಅವರಿಗೆ ಆರು ದಿನಗಳ ಪೊಲೀಸ್ ಕಸ್ಟಡಿ ನೀಡಿತು, ಅದನ್ನು ಈಗ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT