ನೀರಜ್ ಚೋಪ್ರಾ-ಲೊವ್ಲಿನಾ ಬೊರ್ಗೊಹೈ-ಶಿಖರ್ ಧವನ್ 
ಕ್ರೀಡೆ

ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸು

ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ನವದೆಹಲಿ: ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಇನ್ನೂ ಕ್ರಿಕೆಟಿಗ ಶಿಖರ್ ಧವನ್ ಸೇರಿದಂತೆ 35 ಕ್ರೀಡಾಪಟುಗಳ ಹೆಸರನ್ನು ಅರ್ಜುನ ಪ್ರಶಸ್ತಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿ ಶಿಫಾರಸು ಮಾಡಿದೆ.

ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಟೋಕಿಯೊ ಒಲಿಂಪಿಕ್ಸ್ ನಂತರ ಈ ಪ್ರಶಸ್ತಿಗಳನ್ನು ನೀಡಬೇಕೆಂದು ಮುಂದೂಡಿದ್ದರು. 

ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಹೆಸರುಗಳು: 
ನೀರಜ್ ಚೋಪ್ರಾ (ಅಥ್ಲೆಟಿಕ್ಸ್) 
ರವಿ ದಹಿಯಾ (ಕುಸ್ತಿ) 
ಪಿಆರ್ ಶ್ರೀಜೇಶ್ (ಹಾಕಿ) 
ಲೊವ್ಲಿನಾ ಬೊರ್ಗೊಹೈ (ಬಾಕ್ಸಿಂಗ್) 
ಸುನಿಲ್ ಛೆಟ್ರಿ (ಫುಟ್ ಬಾಲ್) 
ಮಿಥಾಲಿ ರಾಜ್ (ಕ್ರಿಕೆಟ್) 
ಪ್ರಮೋದ್ ಭಗತ್ (ಬ್ಯಾಡ್ಮಿಂಟನ್) 
ಸುಮಿತ್ ಆಂಟಿಲ್ (ಅಥ್ಲೆಟಿಕ್ಸ್) 
ಅವನಿ ಲೇಖರ (ಶೂಟಿಂಗ್) 
ಕೃಷ್ಣ ನಗರ (ಬ್ಯಾಡ್ಮಿಂಟನ್) 
ಮನೀಶ್ ನರ್ವಾಲ್ (ಶೂಟಿಂಗ್)                                                                                                                     

ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಹೆಸರುಗಳು: 
ಯೋಗೇಶ್ ಕಥುನಿಯಾ (ಡಿಸ್ಕಸ್ ಥ್ರೋ) 
ನಿಶಾದ್ ಕುಮಾರ್ (ಹೈಜಂಪ್) 
ಪ್ರವೀಣ್ ಕುಮಾರ್ (ಹೈಜಂಪ್) 
ಶರದ್ ಕುಮಾರ್ (ಹೈ ಜಂಪ್) 
ಸುಹಾಸ್ LY (ಬ್ಯಾಡ್ಮಿಂಟನ್) 
ಸಿಂಗ್ರಾಜ್ ಅಧಾನ (ಶೂಟಿಂಗ್) 
ಭಾವಿನಾ ಪಟೇಲ್ (ಟೇಬಲ್ ಟೆನಿಸ್) 
ಹರ್ವಿಂದರ್ ಸಿಂಗ್ (ಶೂಟಿಂಗ್​​) 
ಶಿಖರ್ ಧವನ್ (ಕ್ರಿಕೆಟ್)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT