ಹರ್ವಿಂದರ್ ಸಿಂಗ್ 
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ಸ್: ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ, ಕಂಚು ಗೆದ್ದ ಹರ್ವಿಂದರ್ ಸಿಂಗ್ 

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಶುಕ್ರವಾರ ನಡೆದ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ ಸು ವಿರುದ್ಧ  ಗೆಲುವು ಸಾಧಿಸಿದ ಹರ್ವಿಂದರ್ ಸಿಂಗ್ ಕಂಚಿನ ಪದಕ ಗಳಿಸಿದರು.

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಶುಕ್ರವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ ಸು ವಿರುದ್ಧ  ಗೆಲುವು ಸಾಧಿಸಿದ ಹರ್ವಿಂದರ್ ಸಿಂಗ್ ಕಂಚಿನ ಪದಕ ಗಳಿಸಿದರು.

ಸೆಮಿ ಫೈನಲ್ ನಲ್ಲಿ ಅಮೆರಿಕದ ಕೆವಿನ್ ಮಥರ್ ಎದುರು 6-4 ಅಂತರದಿಂದ ಸೋತ ಸಿಂಗ್, ಕೊರಿಯಾದ ಕಿಮ್ ಮಿನ್ ಸು ವಿರುದ್ಧ 6-5 ಅಂತರದ ಗೆಲುವು ಸಾಧಿಸಿದರು.

ಸೆಮಿ ಫೈನಲ್ ನಲ್ಲಿ ಸಿಂಗ್ ಎದುರು ಗೆಲುವು ಸಾಧಿಸಿದ ಮಥರ್ ಫೈನಲ್ ನಲ್ಲಿ ಚೀನಾದ ಝಾವೋ ಎಲ್ ಎದುರು 6-4 ಅಂತರದಿಂದ ಗೆದ್ದು ಚಿನ್ನದ ಪದಕ ಗೆದ್ದರು. ವಿಶ್ವದ ನಂಬರ್ 23 ಶ್ರೇಯಾಂಕದ ಸಿಂಗ್ 2018ರಲ್ಲಿ ನಡೆದ ಏಷ್ಯಾನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದಿದ್ದರು.

ಪಾಟಿಯಾಲಾದ ಪಂಜಾಬ್ ವಿವಿಯ ಅರ್ಥಶಾಸ್ತ್ರದಲ್ಲಿ ಸ್ಕಾಲರ್ ಆಗಿರುವ ಸಿಂಗ್, ಮಧ್ಯಮ ಕುಟುಂಬದಿಂದ ಬಂದಿದ್ದಾರೆ.ಕೇವಲ ಒಂದೂವರೆ ವರ್ಷವಿದ್ದಾಗ ಡೆಂಘೀ ತಗುಲಿತ್ತು. ಆಗ ಸ್ಥಳೀಯ ವೈದ್ಯರು ವ್ಯತಿರಿಕ್ತವಾದ ಇಂಜೆಕ್ಷನ್ ನೀಡಿದ್ದರಿಂದ ಅವರು ಕಾಲುಗಳು ಸ್ವಾಧೀನ ಕಳೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT