ಚಿನ್ನ ಮತ್ತು ಬೆಳ್ಳಿ ಗೆದ್ದ ಮನೀಶ್ ನರ್ವಾಲ್-ಸಿಂಗರಾಜ್ 
ಕ್ರೀಡೆ

ಟೋಕಿಯೋ ಪ್ಯಾರಾಲಿಂಪಿಕ್ಸ್: ಚಿನ್ನ, ಬೆಳ್ಳಿ ಗೆದ್ದ ಶೂಟರ್ ಜೋಡಿ ಮನೀಶ್ ನರ್ವಾಲ್, ಸಿಂಗರಾಜ್ ಗೆ ಅಭಿನಂದನೆಗಳ ಮಹಾಪೂರ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇಂದು ಚಿನ್ನ ಮತ್ತು ಬೆಳ್ಳಿ ಪದಕ ತಂದು ಕೊಟ್ಟು ವಿಶ್ವ ದಾಖಲೆ ನಿರ್ಮಿಸಿರುವ ಮನೀಶ್ ನರ್ವಾಲ್, ಸಿಂಗರಾಜ್ ಅವರ ಶ್ರಮಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. 

ನವದೆಹಲಿ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇಂದು ಚಿನ್ನ ಮತ್ತು ಬೆಳ್ಳಿ ಪದಕ ತಂದು ಕೊಟ್ಟು ವಿಶ್ವ ದಾಖಲೆ ನಿರ್ಮಿಸಿರುವ ಮನೀಶ್ ನರ್ವಾಲ್, ಸಿಂಗರಾಜ್ ಅವರ ಶ್ರಮಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. 

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶೂಟರ್ ಜೋಡಿಗೆ ಶುಭಾಶಯ ಕೋರಿದ್ದು, ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ವೈಭವ ಮುಂದುವರಿದಿದ್ದು, ಯುವ ಮತ್ತು ಅದ್ಭುತ ಪ್ರತಿಭಾನ್ವಿತ ಮನೀಶ್ ನರ್ವಾಲ್ ಅವರು ಉತ್ತಮ ಸಾಧನೆ ಗೈದಿದ್ದಾರೆ. ಅವರು ಚಿನ್ನದ ಪದಕ ಗೆದ್ದಿರುವುದು ಭಾರತೀಯ ಕ್ರೀಡೆಗೆ ಒಂದು ವಿಶೇಷ ಕ್ಷಣವಾಗಿದೆ. ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. 

ಅಂತೆಯೇ ಬೆಳ್ಳಿ ಪದಕ ಗೆದ್ದ ಸಿಂಗರಾಜ್ ಅವರಿಗೂ ಪ್ರಧಾನಿ ಮೋದಿ ಶುಭ ಕೋರಿದ್ದು, ಮಹೋನ್ನತ ಸಿಂಗರಾಜ್ ಅಧಾನ ಮತ್ತೆ ಅಂತಹುದೇ ಸಾಧನೆ ಮಾಡಿದ್ದು, ಅವರು ಈ ಬಾರಿ ಮಿಶ್ರ 50 ಮೀಟರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಮತ್ತೊಂದು ಪದಕವನ್ನು ಗೆದ್ದಿದ್ದಾರೆ. ಅವರ ಸಾಧನೆಯಿಂದಾಗಿ ಭಾರತವು ಸಂತೋಷಪಡುತ್ತದೆ. ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಅನುರಾಗ್ ಠಾಕೂರ್ ಅವರು, ಚಿನ್ನ ಗೆದ್ದ ಮನೀಶ್ ನರ್ವಾಲ್ ನೂತನ ದಾಖಲೆ ನಿರ್ಮಿಸಿದ್ದಾರೆ. ಅವರಿಗೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಭಾರತದ ಶೂಟರ್ ಗಳ ಸಾಧನೆಯನ್ನು ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಮುಕ್ತ ಕಂಠದಿಂದ ಶ್ಲಾಘಿಸಿದ್ದು, ಇಬ್ಬರು ಭಾರತೀಯರು ಚಿನ್ನ ಹಾಗೂ ಬೆಳ್ಳಿ ಎರಡನ್ನೂ ಗೆಲ್ಲುವುದು ಎಷ್ಟು ಅದ್ಭುತ ಕ್ಷಣ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT