ಸುಧೀರ್-ಮುರಳಿ ಶ್ರೀಶಂಕರ್ 
ಕ್ರೀಡೆ

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!

ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. 

ಬರ್ಮಿಂಗ್​ಹ್ಯಾಮ್: ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. 

ಕಳೆದ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಈ ಮೂಲಕ ಭಾರತದ ಪದಕಗಳ ಸಂಖ್ಯೆ 20ಕ್ಕೇರಿದೆ. 87 ಕೆಜಿ ಇರುವ ಸುಧೀರ್ ತಮ್ಮ ಮೊದಲ ಪ್ರಯತ್ನದಲ್ಲಿ 208 ಕೆಜಿ ಭಾರ ಎತ್ತಿದರು. ಇನ್ನು ಎರಡನೇ ಪ್ರಯತ್ನದಲ್ಲಿ 212 ಕೆಜಿ ಎತ್ತಿ ದಾಖಲೆಯ 134.5 ಅಂಕಗಳನ್ನು ಗಳಿಸಿದರು. ಈ ಮೂಲಕ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಚಿನ್ನದ ಪದಕವನ್ನು ಗೆದ್ದು ಬೀಗಿದರು. 

ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ವಿಶೇಷ ಎಂದರೆ ಮುರಳಿ ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಬೆಳ್ಳಿ ಗೆದ್ದ ಭಾರತದ ಮೊದಲ ಕ್ರೀಡಾಪಟು ಆಗಿದ್ದಾರೆ. ಶ್ರೀಶಂಕರ್ 8.08ಮೀ ಜಿಗಿಯುವ ಮೂಲಕ ಪದಕ ಗೆದ್ದರು. ಇನ್ನು 1978ರಲ್ಲಿ ಸುರೇಶ್ ಬಾಬು ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದರು.

ಭಾರತೀಯ ಪುರುಷರ ಹಾಕಿ ತಂಡವು ವೇಲ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿದ್ದಾರೆ. ಸ್ಟಾರ್ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರ ಅಮೋಘ ಹ್ಯಾಟ್ರಿಕ್ ಹಿನ್ನಲೆಯಲ್ಲಿ ಭಾರತ ತನ್ನ ಕೊನೆಯ ಪೂಲ್ ಬಿ ಪಂದ್ಯದಲ್ಲಿ ವೇಲ್ಸ್ ತಂಡವನ್ನು 4-1 ಗೋಲುಗಳಿಂದ ಸೋಲಿಸಿತು. ಪೂಲ್ ಹಂತದಲ್ಲಿ ಭಾರತ 4 ಪಂದ್ಯಗಳ ಪೈಕಿ 3 ಪಂದ್ಯ ಗೆದ್ದಿದ್ದರೆ 1 ಡ್ರಾ ಆಗಿತ್ತು.

ಭಾರತಕ್ಕೆ ಒಟ್ಟಾರೆ 20 ಪದಕಗಳು ಒಲಿದಿದ್ದು 6 ಚಿನ್ನ, 7 ಬೆಳ್ಳಿ ಹಾಗೂ 7 ಕಂಚಿನ ಪದಕ ಸೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT