ಸಂಭ್ರಮದಲ್ಲಿ ಮೆಸ್ಸಿ 
ಕ್ರೀಡೆ

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್ ಗೆ ತಲೆ ಬಾಗಿದ ಕ್ರೊಯೇಷಿಯಾ, 6ನೇ ಬಾರಿಗೆ ಫೈನಲ್ ಪ್ರವೇಶಿಸಿದ ಅರ್ಜೆಂಟಿನಾ

ಫಿಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಲ್ಲಿ ಮಣಿಸಿ 6ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಕತಾರ್: ಫಿಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಲ್ಲಿ ಮಣಿಸಿ 6ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಮಂಗಳವಾರ ತಡರಾತ್ರಿ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲ್​ಗಳಿಂದ ಮಣಿಸಿದ ಅರ್ಜೆಂಟೀನಾ ಪ್ರಶಸ್ತಿ ಸುತ್ತಿಗೇರಿದ್ದು, ಈ ಮೂಲಕ ಅರ್ಜೆಂಟೀನಾ ತಂಡ ಆರನೇ ಬಾರಿ ವಿಶ್ವ ಕಪ್​ನ ಫೈನಲ್​ಗೇರಿದಂತಾಗಿದೆ. ಅಂತೆಯೇ ವೃತ್ತಿ ಜೀವನ ಕೊನೆಯ ವಿಶ್ವಕಪ್ ಟೂರ್ನಿಯನ್ನಾಡುತ್ತಿರುವ ಮೆಸ್ಸಿಗೆ ಪ್ರಶಸ್ತಿ ಗೆಲ್ಲುವ ಭರವಸೆ ಕೂಡ ಮೂಡಿದಂತಾಗಿದೆ.

ಅರ್ಜೆಂಟೀನಾ ತಂಡದ ಪರ ಜೂಲಿಯಾನ್​ ಅಲ್ವಾರೆಜ್​ (39 ಮತ್ತು 69ನೇ ನಿಮಿಷ) ಅವಳಿ ಗೋಲ್​ ಬಾರಿಸಿದರೆ, ಸ್ಟಾರ್​ ಆಟಗಾರ ಲಿಯೋನೆಲ್​ ಮೆಸ್ಸಿ (39ನೇ ನಿಮಿಷ) ಏಕೈಕ ಗೋಲ್​ ಬಾರಿಸಿದರು. 16ನೇ ಸುತ್ತಿನ ಪಂದ್ಯದಲ್ಲಿ ಜಪಾನ್​ ಹಾಗೂ ಕ್ವಾರ್ಟರ್​ಫೈನಲ್​ ಪಂದ್ಯದಲ್ಲಿ ಬಲಿಷ್ಠ ಬ್ರೆಜಿಲ್​ ತಂಡಕ್ಕೆ ಆಘಾತ ಕೊಟ್ಟು ಸೆಮಿ ಹಂತಕ್ಕೆ ಪ್ರವೇಶ ಪಡೆದಿದ್ದ ಕ್ರೊಯೇಷಿಯಾ ಬಳಗಕ್ಕೆ ಈ ಬಾರಿ ಅದ್ಭುತ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ರಕ್ಷಣಾ ವಿಭಾಗ ಹೆಚ್ಚು ಕಾರ್ಯಪ್ರವೃತ್ತವಾಗಿದ್ದ ಹೊರತಾಗಿಯೂ ಗೋಲ್​ ಬಾರಿಸಲು ವಿಫಲಗೊಂಡು ನಿರಾಸೆ ಎದುರಿಸಿತು.

ಪಂದ್ಯದ ಪ್ರಥಮಾರ್ಧ ಮುಕ್ತಾಯದ ವೇಳೆಗೆ 2-0 ಗೋಲ್​ಗಳ ಮುನ್ನಡೆ ಪಡೆದುಕೊಂಡ ಅರ್ಜೆಂಟೀನಾ ಬಳಗ, ದ್ವಿತೀಯಾರ್ಧದಲ್ಲೂ ಅದೇ ಮಾದರಿಯ ಆಟವನ್ನು ಮುಂದುವರಿಸಿ 69ನೇ ನಿಮಿಷದಲ್ಲಿ ಮತ್ತೊಂದು ಗೋಲ್​ ಹೊಡೆದು ವಿಜಯದ ಅಂತರವನ್ನು ಹೆಚ್ಚಿಸಿಕೊಂಡಿತು. ಬುಧವಾರ ರಾತ್ರಿ ನಡೆಯಲಿರುವ ಫ್ರಾನ್ಸ್ ಮತ್ತು ಮೊರಾಕ್ಕೊ ತಂಡಗಳ ನಡುವಿನ ಎರಡನೇ ಸೆಮಿಫೈನಲ್​ ಪಂದ್ಯದ ವಿಜೇತರು ಫೈನಲ್​ನಲ್ಲಿ ಅರ್ಜೆಂಟೀನಾಗೆ ಎದುರಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT