ಫಾತಿಮಾ ನಿದಾ 
ಕ್ರೀಡೆ

ಕ್ರೀಡೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಗಳ ಸಾವಿನ ಸುದ್ದಿ ನ್ಯೂಸ್ ಚಾನಲ್‌ನಲ್ಲಿ ನೋಡಿ ಕುಸಿದುಬಿದ್ದ ತಂದೆ!

ನಾಗ್ಪುರದ ಆಸ್ಪತ್ರೆಯೊಂದರಲ್ಲಿ 10 ವರ್ಷದ ಮಲಯಾಳಿ ಸೈಕಲ್ ಪೋಲೋ ಆಟಗಾರ್ತಿ ನಿಗೂಢವಾಗಿ ಸಾವನ್ನಪ್ಪಿದ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ನಾಗ್ಪುರದ ಆಸ್ಪತ್ರೆಯೊಂದರಲ್ಲಿ 10 ವರ್ಷದ ಮಲಯಾಳಿ ಸೈಕಲ್ ಪೋಲೋ ಆಟಗಾರ್ತಿ ನಿಗೂಢವಾಗಿ ಸಾವನ್ನಪ್ಪಿದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 

ಕೇರಳದ ಮೂಲದ ಫಾತಿಮಾ ನಿದಾ ಶಿಹಾಬುದ್ದೀನ್ ನಿಗೂಢ ರೀತಿಯಲ್ಲಿ ಹಠಾತ್ ಸಾವನ್ನಪ್ಪಿದ್ದು ರಾಷ್ಟ್ರೀಯ ಸೈಕಲ್ ಪೋಲೋ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ನಾಗ್ಪುರಕ್ಕೆ ಬಂದಿದ್ದಳು.

ನಿನ್ನೆ ಇದ್ದಕ್ಕಿದ್ದಂತೆ ಫಾತಿಮಾ ಆರೋಗ್ಯ ಹದಗೆಟ್ಟಿದ್ದು, ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಳು. ಆಕೆಯನ್ನು ಚಿಕಿತ್ಸೆಗಾಗಿ ನಾಗ್ಪುರದ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆಕೆಗೆ ಚುಚ್ಚುಮದ್ದು ನೀಡಲಾಗಿತ್ತು. ಚುಚ್ಚುಮದ್ದಿನ ನಂತರ ಫಾತಿಮಾ ಸಾವನ್ನಪ್ಪಿದ್ದಳು.

ಮಗಳು ಅಸ್ವಸ್ಥಗೊಂಡ ಬಗ್ಗೆ ಮಾಹಿತಿ ತಿಳಿದ ಕೂಡಲೇ ಫಾತಿಮಾ ತಂದೆ ಶಿಹಾಬುದ್ದೀನ್ ಕೇರಳ ವಿಮಾನ ನಿಲ್ದಾಣಕ್ಕೆ ಬರುತ್ತಾರೆ. ಅಲ್ಲಿ ಸುದ್ದಿ ವಾಹಿನಿಗಳಲ್ಲಿ ತಮ್ಮ ಮಗಳ ಸುದ್ದಿ ಬರುತ್ತಿದ್ದುದ್ದನ್ನು ಕಂಡ ಅವರು ಅಲ್ಲೇ ಕುಸಿದು ಬೀಳುತ್ತಾರೆ. ನಂತರ ಸಮಾಧಾನಗೊಂಡ ಅವರು ಕೇರಳದಿಂದ ನಾಗ್ಪುರಕ್ಕೆ ಆಗಮಿಸಿದ್ದು ಇಂದು ಫಾತಿಮಾ ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಫಾತಿಮಾ ನಿದಾ ಸಾವಿಗೆ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದು, ಫಾತಿಮಾ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ಒತ್ತಾಯಿಸಿದ್ದಾರೆ.

ಕೇರಳದ ಆಟಗಾರರನ್ನು ರಾಷ್ಟ್ರೀಯ ಫೆಡರೇಶನ್ ಕಡೆಗಣಿಸಿತು. ಫೆಡರೇಶನ್ ತಂಡಕ್ಕೆ ವಸತಿ ಮತ್ತು ಆಹಾರವನ್ನು ಒದಗಿಸುವುದರಿಂದ ಹಿಂದೆ ಸರಿಯಿತು. ಹೀಗಾಗಿ ಕೇರಳ ಸೈಕಲ್ ಪೋಲೋ ಅಸೋಸಿಯೇಷನ್ ​​ಸ್ವತಃ ತನ್ನ ತಂಡಕ್ಕೆ ವ್ಯವಸ್ಥೆ ಮಾಡಿತು. ಇದಕ್ಕಾಗಿ ಕೇರಳದಲ್ಲಿ ಹಲವರಿಂದ ದೇಣಿಗೆ ಸಂಗ್ರಹಿಸಲಾಯಿತು.

ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಕ್ರೀಡಾ ಇಲಾಖೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಮಕ್ಕಳ ಮೇಲಿನ ಮಾನಸಿಕ ಒತ್ತಡವನ್ನು ಹೋಗಲಾಡಿಸಿ ಮಕ್ಕಳ ಬಗ್ಗೆ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಸುಧಾಕರನ್ ಮನವಿ ಮಾಡಿದ್ದಾರೆ. ಅಲ್ಲದೆ ಫಾತಿಮಾ ಸಾವಿನ ಬಗ್ಗೆ ಆಳವಾದ ತನಿಖೆ ನಡೆಯಬೇಕಿದೆ ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT