ಅಣ್ಣು ರಾಣಿ 
ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಪದಕ ಗೆಲ್ಲುವ ಅಣ್ಣು ರಾಣಿ ಕನಸು ಭಗ್ನ; ಏಳನೇ ಸ್ಥಾನಕ್ಕೆ ತೃಪ್ತಿ

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ್ತಿ ಅಣ್ಣು ರಾಣಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ಅವರ ಕನಸು ನನಸಾಗಲಿಲ್ಲ.

ಯುಜೀನ್ (ಅಮೆರಿಕ): ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ್ತಿ ಅಣ್ಣು ರಾಣಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ಅವರ ಕನಸು ನನಸಾಗಲಿಲ್ಲ. 29 ಹರೆಯದ ಅಣ್ಣು ಅವರು ಶುಕ್ರವಾರ (ಭಾರತದಲ್ಲಿ ಶನಿವಾರ ಬೆಳಗ್ಗೆ) ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್‌ನಲ್ಲಿ ಏಳನೇ ಸ್ಥಾನ ಗಳಿಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಿದರು.

56.18 ಮೀ ಎಸೆತದೊಂದಿಗೆ ಶುಭಾರಂಭ ಮಾಡಿದ ಅಣ್ಣು ಅವರು, ಎರಡನೇ ಪ್ರಯತ್ನದಲ್ಲಿ 61.12 ಮೀ ಅತ್ಯುತ್ತಮ ಎಸೆತ ಮಾಡಿದರು. ಆದರೆ ತನ್ನ ಉಳಿದ ಪ್ರಯತ್ನಗಳಲ್ಲಿ 60 ಮೀ ಮಾರ್ಕ್ ಅನ್ನು ದಾಟಲು ವಿಫಲರಾದರು. ತಮ್ಮ ಕೊನೆಯ ನಾಲ್ಕು ಸುತ್ತುಗಳಲ್ಲಿ 59.27 ಮೀ, 58.14ಮೀ, 59.98ಮೀ ಮತ್ತು 58.70ಮೀ ಎಸೆದರು.

ಕ್ವಾಲಿಫೈಯರ್‌ನಲ್ಲಿ 59.60 ಮೀ ಅತ್ಯುತ್ತಮ ಎಸೆತದೊಂದಿಗೆ ಎಂಟನೇ ಸ್ಥಾನ ಗಳಿಸಿದ್ದ ಅವರು, 12 ಮಹಿಳೆಯರೊಂದಿಗೆ ಫೈನಲ್‌ ಪ್ರವೇಶಿಸಿದ್ದರು. ಇದು ವಿಶ್ವ ಚಾಂಪಿಯನ್‌ಶಿಪ್‌ವೊಂದರಲ್ಲಿ ಅವರ ಎರಡನೇ ಫೈನಲ್ ಆಗಿತ್ತು. ಅವರು ದೋಹಾದಲ್ಲಿ 2019 ರ ಆವೃತ್ತಿಯಲ್ಲಿ ಎಂಟನೇ ಸ್ಥಾನ ಪಡೆದುಕೊಂಡಿದ್ದರು.

ಈಗ 63.82 ಮೀ ಎಸೆಯುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ಹೊಂದಿರುವ ಅಣ್ಣು, ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈ 28 ರಂದು ಪ್ರಾರಂಭವಾಗುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.

ಅಮೆರಿಕದಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಆಸ್ಟ್ರೇಲಿಯಾದ ಕೆಲ್ಸಿ-ಲೀ ಬಾರ್ಬರ್ ಚಿನ್ನದ ಪದಕ ಗೆದ್ದರು. ಅವರು 66.91 ಮೀಟರ್ ಎಸೆಯುವ ಮೂಲಕ ಗೆಲುವು ಸಾಧಿಸಿದರು. ಅಲ್ಲದೆ 66.91 ಮೀಟರ್‌ ದೂರ ಎಸೆಯುವುದರೊಂದಿಗೆ ಕೆಲ್ಸಿ ಈ ವರ್ಷದ ಹೊಸ ಇತಿಹಾಸ ಸೃಷ್ಟಿಸಿದರು.

ಅಮೆರಿಕದ ಕಾರಾ ವಿಂಗರ್ ತನ್ನ ಅಂತಿಮ ಪ್ರಯತ್ನದಲ್ಲಿ 64.05 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದರೆ, ಜಪಾನ್‌ನ ಹರುಕಾ ಕಿಟಾಗುಚಿ 63.27 ಮೀಟರ್ ಎಸೆದು ಕಂಚಿನ ಪದಕ ಪಡೆದರು.

ಟೋಕಿಯೊ ಒಲಿಂಪಿಕ್ ಚಾಂಪಿಯನ್ ಚೀನಾದ ಲಿಯು ಕ್ಸಿಯಿಂಗ್ ಪದಕ ವಂಚಿತರಾದರು. 63.25 ಮೀಟರ್‌ ದೂರ ಎಸೆದು ನಾಲ್ಕನೇ ಸ್ಥಾನ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT