ನೀರಜ್ ಚೋಪ್ರಾ 
ಕ್ರೀಡೆ

ನೀರಜ್ ಚೋಪ್ರಾಗೆ ಗಾಯ, ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ...

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಮಂಗಳವಾರ ತಿಳಿಸಿದೆ.

ಒರೆಗಾನ್‌ನಲ್ಲಿ ಭಾನುವಾರ ನಡೆದ ಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ನಲ್ಲಿ 88.13 ಮೀಟರ್‌ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದ ನೀರಜ್, ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ತಮ್ಮ ಪ್ರದರ್ಶನದ ವೇಳೆ ಗಾಯಗೊಂಡಿದ್ದರಿಂದ ಕಾಮನ್‌ವೆಲ್ತ್ ಗೇಮ್ಸ್ ಗೆ ಲಭ್ಯವಾಗುತ್ತಿಲ್ಲ.

ಟೀಂ ಇಂಡಿಯಾ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಫಿಟ್ನೆಸ್ ಕಾಳಜಿಯಿಂದಾಗಿ ಬರ್ಮಿಂಗ್ ಹ್ಯಾಮ್ 2022 ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲು ಯುಎಸ್ ನಿಂದ ನನಗೆ ಕರೆ ಬಂದಿತ್ತು. 2022 ರ ಯುಜೀನ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ ನಂತರ, ಚೋಪ್ರಾ ಅವರು ಸೋಮವಾರ ಎಂಆರ್ ಐ ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ ಮತ್ತು ಅದರ ಆಧಾರದ ಮೇಲೆ ಅವರ ವೈದ್ಯಕೀಯ ತಂಡವು ಅವರಿಗೆ ಒಂದು ತಿಂಗಳ ವಿಶ್ರಾಂತಿಗೆ ಸಲಹೆ ನೀಡಿದೆ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.

ಕಳೆದ ವರ್ಷದ ಟೋಕಿಯೊ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್, ಹಾಲಿ ಒಲಿಂಪಿಕ್ ಚಾಂಪಿಯನ್ ಕೂಡ ಆಗಿದ್ದಾರೆ. ಒರೆಗಾನ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ನಂತರ ನೀರಜ್, ಫೈನಲ್‌ನಲ್ಲಿ ನಾಲ್ಕನೇ ಪ್ರಯತ್ನದ ಬಳಿಕ ತಮ್ಮ ತೊಡೆಯಲ್ಲಿ ಕಂಡು ಬಂದ ಸ್ವಲ್ಪ ಅಸ್ವಸ್ಥತೆ ಬಗ್ಗೆ ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT