ಕ್ರಿಸ್ಟಿಯಾನೋ ರೊನಾಲ್ಡೊ 
ಕ್ರೀಡೆ

ರೊನಾಲ್ಡೋ ವಿರುದ್ಧದ ಅತ್ಯಾಚಾರ ಪ್ರಕರಣ ವಜಾಗೊಳಿಸಿದ ನ್ಯಾಯಾಧೀಶ

ಮ್ಯಾಂಚೆಸ್ಟರ್ ಯುನೈಟೆಡ್ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿರುದ್ಧದ ಲಾಸ್ ವೇಗಾಸ್ ಅತ್ಯಾಚಾರ ಮೊಕದ್ದಮೆಯನ್ನು ಅಮೆರಿಕ ಜಿಲ್ಲಾ ನ್ಯಾಯಾಧೀಶರು ಶನಿವಾರ ವಜಾಗೊಳಿಸಿದ್ದಾರೆ.

ವಾಷಿಂಗ್ಟನ್: ಮ್ಯಾಂಚೆಸ್ಟರ್ ಯುನೈಟೆಡ್ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿರುದ್ಧದ ಲಾಸ್ ವೇಗಾಸ್ ಅತ್ಯಾಚಾರ ಮೊಕದ್ದಮೆಯನ್ನು ಅಮೆರಿಕ ಜಿಲ್ಲಾ ನ್ಯಾಯಾಧೀಶರು ಶನಿವಾರ ವಜಾಗೊಳಿಸಿದ್ದಾರೆ.

ಫೆಡರಲ್ ನ್ಯಾಯಾಧೀಶರಾದ ಜೆನ್ನಿಫರ್ ಡೋರ್ಸೆ ಅವರು ಮಹಿಳೆ ಸಲ್ಲಿಸಿದ ಮೊಕದ್ದಮೆಯು ಆಕೆಯ ವಕೀಲರಿಂದ ಪಡೆದ "ಪುರ್ಲೋಯಿನ್ಡ್" ಗೌಪ್ಯ ದಾಖಲೆಗಳನ್ನು ಆಧರಿಸಿ ಈ ಮಹತ್ವದ ಆದೇಶ ನೀಡಿದ್ದಾರೆ. ಅಂತೆಯೇ ಈ ಪ್ರಕರಣವನ್ನು ಫುಟ್ ಬಾಲ್ ತಾರೆ ವರ್ಚಸ್ಸಿಗೆ ಕಳಂಕ ಹಚ್ಚುವ  ಪ್ರಯತ್ನ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಮಹಿಳೆಯ ಪರ ವಕೀಲ ಲೆಸ್ಲಿ ಮಾರ್ಕ್ ಸ್ಟೊವಾಲ್ ಅವರ ನಡವಳಿಕೆಯಿಂದ ರೊನಾಲ್ಡೊ ಅವರ ಗೌರವಕ್ಕೆ ಹಾನಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಧೀಶರು ತಮ್ಮ 42 ಪುಟಗಳ ಆದೇಶದಲ್ಲಿ ಪ್ರಕರಣವನ್ನು ಮತ್ತೆ ಸಲ್ಲಿಸಲು ಯಾವುದೇ ಆಯ್ಕೆಯಿಲ್ಲದೆ ಸಂಪೂರ್ಣವಾಗಿ ವಜಾಗೊಳಿಸಲು ಸೂಚಿಸಿದ್ದಾರೆ. ಈ ಕುರಿತಂತೆ ಗೋಲ್ ಡಾಟ್ ಕಾಮ್ ವರದಿ ಆಧರಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದ್ದು, ನ್ಯಾಯಾಧೀಶರ ಲಿಖಿತ  ತೀರ್ಪಿನಲ್ಲಿ, ಈ ಪ್ರಕರಣವನ್ನು ಮುಂದುವರಿಸುವ ಅವಕಾಶವನ್ನು ಅರ್ಜಿದಾರರು ಕಳೆದುಕೊಳ್ಳುತ್ತಾರೆ, ಹೆಚ್ಚು ವೈಯಕ್ತಿಕ ಸ್ವಭಾವದ ಗಂಭೀರ ಆರೋಪಗಳನ್ನು ಸೂಚಿಸುವ ಹಕ್ಕುಗಳ ಇತ್ಯರ್ಥವನ್ನು ಬಿಚ್ಚಿಡಲು ಈ ಅರ್ಜಿದಾರರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
2009 ರಲ್ಲಿ ಲಾಸ್ ವೇಗಾಸ್‌ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಹೇಳಿಕೊಂಡ ನಂತರ ರೊನಾಲ್ಡೊ ಮಹಿಳೆಗೆ USD 375,000 ಪಾವತಿಸಿದ್ದರು. ಮಹಿಳಾ ಪರ ವಕೀಲರಾದ ಲೆಸ್ಲಿ ಸ್ಟೋವಾಲ್ ಅವರು ಫುಟ್ಬಾಲ್ ಲೀಕ್ಸ್ ಸೃಷ್ಟಿಕರ್ತ ರುಯಿ ಪಿಂಟೊ ಅವರಿಂದ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದರು, ನ್ಯಾಯಾಧೀಶರು ಗೌಪ್ಯ ಮತ್ತು ವಿಶೇಷ ಮತ್ತು ಸಾಕ್ಷಿಯಾಗಿ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ತೀರ್ಪು ನೀಡಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT