ಭಾರತದ ಬಾಕ್ಸರ್ ನಿಖತ್ ಜರೀನ್ 
ಕ್ರೀಡೆ

ಹಿಂದು-ಮುಸ್ಲಿಂ ಮುಖ್ಯವಲ್ಲ; ನಾನು ಪ್ರತಿನಿಧಿಸುತ್ತಿರುವುದು ಸಮುದಾಯವನ್ನಲ್ಲ, ಬದಲಿಗೆ ಭಾರತ ದೇಶವನ್ನು: ನಿಖತ್ ಜರೀನ್

ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ, ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಇದು ವಿಶ್ವ ಚಾಂಪಿಯನ್ ಬಾಕ್ಸರ್ ನಿಖತ್ ಜರೀನ್ ಮಾತು. ಆಕೆಯ ಸಾಧನೆಗಳಿಗಿಂತ ಆಕೆಯ ಧಾರ್ಮಿಕ ಹಿನ್ನೆಲೆಯ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದಾಗ ಈಕೆಯ ದಿಟ್ಟ

ನವದೆಹಲಿ: ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ, ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಇದು ವಿಶ್ವ ಚಾಂಪಿಯನ್ ಬಾಕ್ಸರ್ ನಿಖತ್ ಜರೀನ್ ಮಾತು. ಆಕೆಯ ಸಾಧನೆಗಳಿಗಿಂತ ಆಕೆಯ ಧಾರ್ಮಿಕ ಹಿನ್ನೆಲೆಯ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದಾಗ ಈಕೆಯ ದಿಟ್ಟ ಉತ್ತರವಿದು. 

"ನನ್ನ ದೇಶಕ್ಕಾಗಿ ಪದಕ ಗೆಲ್ಲಲು ನನಗೆ ಸಂತೋಷವಾಗಿದೆ" ಎಂದು ತೆಲಂಗಾಣ ಮೂಲದ 25 ವರ್ಷದ ಕ್ರೀಡಾಪಟು ಸಂವಾದ ವೇಳೆ ಹೇಳಿದ್ದಾರೆ. ಕ್ರೀಡಾಕೂಟಗಳಲ್ಲಿ ಮಾನಸಿಕ ಒತ್ತಡವನ್ನು ನಿಭಾಯಿಸಲು ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದರು.

ಜರೀನ್ ಕಳೆದ ತಿಂಗಳು ಟರ್ಕಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುತಾಮಾಸ್ ಅವರನ್ನು 5-0 ಅಂತರದಿಂದ ಸೋಲಿಸಿ ವಿಶ್ವ ಚಾಂಪಿಯನ್ ಕಿರೀಟವನ್ನು ಅಲಂಕರಿಸಿದ ಐದನೇ ಭಾರತೀಯ ಮಹಿಳೆಯಾಗಿದ್ದಾರೆ.

ಸಾಂಪ್ರದಾಯಿಕ ಸಮಾಜವಾದ ಮುಸ್ಲಿಂ ಸಮುದಾಯದಿಂದ ಬಂದಿರುವ ಜರೀನ್ ಬಾಕ್ಸಿಂಗ್‌ನಲ್ಲಿ ವೃತ್ತಿಜೀವನಕ್ಕೆ ಸಾಮಾಜಿಕ ಪಿಡುಗನ್ನು ಮೊದಲು ತೊಲಗಿಸಬೇಕು ಎಂದಿದ್ದಾರೆ.

ಭಾರತೀಯ ಕ್ರೀಡಾಪಟುಗಳಲ್ಲಿ ಮಾನಸಿಕ ಒತ್ತಡ ಬಹಳವಾಗಿದ್ದು, ಅದನ್ನು ನಿಭಾಯಿಸುವುದನ್ನು ಕ್ರೀಡಾಪಟುಗಳು ಕಲಿಯಬೇಕಿದೆ, ಈ ನಿಟ್ಟಿನಲ್ಲಿ ಆದ್ಯತೆ ತರಬೇತಿ ಮುಖ್ಯ ಎಂದಿದ್ದಾರೆ. ಭಾರತೀಯ ಅಥ್ಲೀಟ್‌ಗಳು ನಿಯಮಿತ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಪ್ರವೃತ್ತಿಯನ್ನು ಹೊಂದಿದ್ದಾರೆ ಆದರೆ ಒಲಿಂಪಿಕ್ಸ್ ಅಥವಾ ವಿಶ್ವ ಚಾಂಪಿಯನ್‌ಶಿಪ್‌ನಂತಹ ದೊಡ್ಡ ಹಂತದಲ್ಲಿ ಎಡವುತ್ತಾರೆ.

ನಮ್ಮ ಭಾರತೀಯ ಬಾಕ್ಸರ್‌ಗಳು ತುಂಬಾ ಪ್ರತಿಭಾವಂತರು, ನಾವು ಯಾರಿಗೂ ಕಡಿಮೆ ಇಲ್ಲ. ನಮ್ಮಲ್ಲಿ ಶಕ್ತಿ, ವೇಗ ಮತ್ತು ಶಕ್ತಿ..ಎಲ್ಲವೂ ಇದೆ ಎಂದರು. ಎತ್ತರಕ್ಕೆ ತಲುಪಿದಾಗ ಭಾರತೀಯ ಬಾಕ್ಸರ್‌ಗಳಿಗೆ ಮಾನಸಿಕ ಒತ್ತಡವನ್ನು ನಿಭಾಯಿಸಲು ತರಬೇತಿ ನೀಡಬೇಕು ಎಂದರು.

ಕಳೆದ ತಿಂಗಳು ಫ್ಲೈವೇಟ್ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡ ಜರೀನ್, ಜುಲೈ 28 ರಿಂದ ಪ್ರಾರಂಭವಾಗುವ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್‌ಗೆ ಸಹ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT