ಶರತ್ ಕಮಲ್ ಅಚಂತ್ 
ಕ್ರೀಡೆ

ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಶರತ್ ಕಮಲ್ ಅಚಂತ್ ಆಯ್ಕೆ, 25 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ

ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಭಾರತ ಸರ್ಕಾರ ನೀಡುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೆಬಲ್ ಟೆನಿಸ್ ಆಟಗಾರ ಶರತ್ ಕಮಲ್ ಅಚಂತ್ ಆಯ್ಕೆಯಾಗಿದ್ದಾರೆ.

ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಭಾರತ ಸರ್ಕಾರ ನೀಡುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೆಬಲ್ ಟೆನಿಸ್ ಆಟಗಾರ ಶರತ್ ಕಮಲ್ ಅಚಂತ್ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವೆಂಬರ್ 30ರಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಿದ್ದಾರೆ. ಕ್ರೀಡೆಯಲ್ಲಿನ ಅತ್ಯುತ್ತಮ ಸಾಧನೆಗಾಗಿ 25 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ತಿಳಿಸಿದೆ. 

ಚೆಸ್ ಆಟಗಾರ ಆರ್ ಪ್ರಜ್ಞಾನಂದ. ಒಡಿಶಾ ಹಾಕಿ ತಾರೆ ದೀಪ್ ಗ್ರೇಸ್ ಎಕ್ಕಾ. ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಆದರೆ ಈ ಬಾರಿ ಯಾವುದೇ ಕ್ರಿಕೆಟಿಗರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT