ವಿನೇಶ್ ಪೋಗಟ್ 
ಕ್ರೀಡೆ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್: ಸೋತರು ರೆಪಿಚೇಜ್ ಸುತ್ತಿಗೆ ವಿನೇಶ್ ಪೋಗಟ್ ಪ್ರವೇಶ; ಕಂಚು ಗೆಲ್ಲಲು ಅವಕಾಶ!

ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ 2022ರಲ್ಲಿ ಭಾರತೀಯ ಮಹಿಳಾ ಕುಸ್ತಿಪಟುಗಳ ನಿರಾಶಾದಾಯಕ ಪ್ರದರ್ಶನ ಮುಂದುವರೆದಿದೆ.

ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ 2022ರಲ್ಲಿ ಭಾರತೀಯ ಮಹಿಳಾ ಕುಸ್ತಿಪಟುಗಳ ನಿರಾಶಾದಾಯಕ ಪ್ರದರ್ಶನ ಮುಂದುವರೆದಿದೆ. ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಫೋಗಟ್ 53 ಕೆಜಿ ವಿಭಾಗದ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. 

2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ವಿನೇಶ್, ಮಂಗೋಲಿಯನ್ ಕುಸ್ತಿಪಟು ಖುಲಾನ್ ಬತ್ಖುಯಾಗ್ ವಿರುದ್ಧ 7-0 ಅಂತರದಿಂದ ಸೋಲು ಕಂಡಿದ್ದರು.

ಇನ್ನು ಖುಲಾನ್ ಬತ್ಖುಯಾಗ್ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವುದರಿಂದ ಸೆಪ್ಟೆಂಬರ್ 14ರ ಬುಧವಾರದ ರಿಪಿಚೇಜ್ ಸುತ್ತಿನಲ್ಲಿ ವಿನೇಶ್ ಪದಕ ಗೆಲ್ಲುವ ಅವಕಾಶವನ್ನು ಹೊಂದಿರುತ್ತಾರೆ. ವಿನೇಶ್ ಬುಧವಾರ ನಡೆಯಲಿರುವ ರಿಪೆಚೇಜ್ ಸುತ್ತಿನಲ್ಲಿ ಕಜಕಿಸ್ತಾನದ ಜುಲ್ದಿಜ್ ಅಶಿಮೊವಾ ಅವರನ್ನು ಎದುರಿಸಲಿದ್ದಾರೆ. ರೆಪೆಚೇಜ್ ಸುತ್ತಿನ ಪಂದ್ಯದಲ್ಲಿ ವಿನೇಶ್ ಗೆದ್ದರೆ ಕಂಚಿನ ಪದಕ ತನ್ನ ಪಾಲಿಗೆ ಬರಲಿದೆ.

#ರಿಪಿಚೇಜ್ ರೌಂಡ್ ಎಂದರೇನು?
ರೆಪಿಚೇಜ್ ಸುತ್ತಿನ ಮೂಲಕ ಪ್ರಾಥಮಿಕ ಸುತ್ತಿನಲ್ಲಿ ಸೋತ ಕುಸ್ತಿಪಟುಗಳು ಕಂಚಿನ ಪದಕ ಗೆಲ್ಲುವ ಮತ್ತೊಂದು ಅವಕಾಶವನ್ನು ಪಡೆಯುತ್ತಾರೆ. ಆದರೆ, ಕುಸ್ತಿಪಟುವಿಗೆ ತಾನು ಸೋತಿರುವ ಕುಸ್ತಿಪಟು ಫೈನಲ್‌ಗೆ ತಲುಪಿದಾಗ ಮಾತ್ರ ಇದು ಸಾಧ್ಯ.

ಸರಳ ಭಾಷೆಯಲ್ಲಿ ಹೇಳುವುದಾದರೆ, ಫೈನಲ್ ತಲುಪಿದ ಆಟಗಾರರು, ನಾಕೌಟ್ ಸುತ್ತಿನಲ್ಲಿ ಸೋತವರು, ಆ ಆಟಗಾರರು ರೆಪಿಚೇಜ್ ಸುತ್ತಿನ ಮೂಲಕ ಕಂಚಿನ ಪದಕ ಗೆಲ್ಲುವ ಅವಕಾಶವನ್ನು ಪಡೆಯುತ್ತಾರೆ. ಇದೀಗ ವಿನೇಶ್ ಅವರನ್ನು ಸೋಲಿಸಿದ ಕುಸ್ತಿಪಟು ಫೈನಲ್ ತಲುಪಿರುವುದರಿಂದ ಭಾರತದ ಕುಸ್ತಿಪಟು ಕಂಚು ಗೆಲ್ಲುವ ಅವಕಾಶ ಪಡೆಯಲಿದ್ದಾರೆ.

2022ರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇನ್ನೂ ಒಂದು ಪದಕ ಗೆದ್ದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT