ಮೀರಾಬಾಯಿ ಚಾನು 
ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟ 2022: ಗಾಯದ ಹೊರತಾಗಿಯೂ ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು!

ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು.

ಗಾಂಧಿನಗರ: ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು.

ಆಗಸ್ಟ್‌ನಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೀರಾಬಾಯಿ, ಸ್ನ್ಯಾಚ್‌ನಲ್ಲಿ 84 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 107 ಕೆಜಿ ಎತ್ತುವ ಮೂಲಕ ಪ್ರಶಸ್ತಿ ಗೆದ್ದಿದ್ದರು.

ತನ್ನ ಎರಡನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಮೀರಾಬಾಯಿ, ತನಗೆ ಎಡ ಮಣಿಕಟ್ಟಿನ ಗಾಯವಾಗಿದೆ ಎಂದು ಬಹಿರಂಗಪಡಿಸಿದರು. ಇತ್ತೀಚೆಗೆ ಎನ್‌ಐಎಸ್ ಪಟಿಯಾಲಾದಲ್ಲಿ ತರಬೇತಿಯ ಸಮಯದಲ್ಲಿ, ನನ್ನ ಎಡ ಮಣಿಕಟ್ಟಿಗೆ ಗಾಯವಾಯಿತು. ನಂತರ ನಾನು ಹೆಚ್ಚು ಅಪಾಯವನ್ನು ತೆಗೆದುಕೊಳ್ಳದಂತೆ ನೋಡಿಕೊಂಡೆ. ಡಿಸೆಂಬರ್‌ನಲ್ಲಿ ವಿಶ್ವ ಚಾಂಪಿಯನ್‌ಶಿಪ್ ಕೂಡ ನಡೆಯಲಿದೆ ಎಂದರು.

ಚಿನ್ನದ ಪದಕ ಗೆದ್ದ ದಿವ್ಯಾ ಕಕ್ರನ್
ಅರ್ಜುನ್ ಪ್ರಶಸ್ತಿ ಪುರಸ್ಕೃತ ಕುಸ್ತಿಪಟು ದಿವ್ಯಾ ಕಾಕ್ರನ್ ತನ್ನ ಜಿಲ್ಲೆ ಮುಜಾಫರ್‌ನಗರಕ್ಕೆ ಮತ್ತೊಮ್ಮೆ ಪ್ರಶಸ್ತಿಗಳನ್ನು ತಂದಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದಿವ್ಯಾ ಅವರು ಮಹಿಳೆಯರ 76 ಕೆಜಿ ತೂಕ ವಿಭಾಗದಲ್ಲಿ ಹಿಮಾಚಲ ಪ್ರದೇಶದ ಕುಸ್ತಿಪಟು ರಾಣಿ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT