ಭಾರತ ಹಾಕಿ ತಂಡ 
ಕ್ರೀಡೆ

ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ 

ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಚೆನ್ನೈ: ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷಿಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಮೊದಲಾರ್ಧದಲ್ಲಿ ಮಲೇಷಿಯಾ ಆಕ್ರಮಣಕಾರಿ ಆಟವಾಡಿದ್ದರಿಂದ ಭಾರತೀಯರು ಎದುರಾಳಿಯನ್ನು ನಿರ್ಬಂಧಿಸಲು ಕಷ್ಟಪಟ್ಟರು. ಭಾರತ ಒಂಬತ್ತನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಜುಗ್ರಾಜ್ ಸಿಂಗ್  ನೆರವಿನೊಂದಿಗೆ ಮೊದಲ ಗೋಲು ಗಳಿಸಿತು. ಪಂದ್ಯ ಮುಂದುವರೆದಂತೆ ನಿಧಾನರಾದಂತೆ ಕಂಡುಬಂದ ಭಾರತೀಯ ಆಟಗಾರರು ತದನಂತರ ಆದ್ಬುತವಾಗಿ ಕಂಬ್ಯಾಕ್ ಮಾಡಿದರು. ಹರ್ಮನ್ ಪ್ರೀತ್ ಸಿಂಗ್ (45ನೇ ನಿಮಿಷ) ಗುರುಜಂತ್ ಸಿಂಗ್ (45ನೇ ನಿಮಿಷ) ಮತ್ತು ಆಕಾಶ್ ದೀಪ್ ಸಿಂಗ್ (56ನೇ ನಿಮಿಷ)ದಲ್ಲಿ ಗೋಲು ಗಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 

ಒಂದು ಹಂತದಲ್ಲಿ 3-3 ಗೋಲುಗಳಿಂದ ಎರಡು ತಂಡಗಳು ಸಮಾನ ಗೋಲುಗಳಿಸಿದಾಗ  ಮನ್‌ದೀಪ್ ಸಿಂಗ್ ಅವರಿಂದ ಪಾಸ್ ಪಡೆದ ಆಕಾಶದೀಪ್ ಸಿಂಗ್ ಮತ್ತೊಂದು ಗೋಲು ಗಳಿಸುವ ಮೂಲಕ ಭಾರತ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದರು. ಇದೇ ಕ್ರೀಡಾಂಗಣದಲ್ಲಿ ಭಾರತಕ್ಕೆ ದೊರೆತ ನಾಲ್ಕನೇ ಗೆಲುವು ಇದಾಗಿದೆ. ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT