ಎಂಎಸ್ ಧೋನಿ 
ಕ್ರೀಡೆ

ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್ 

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಈ ಆದೇಶ ನೀಡಿದೆ. ಅಲ್ಲದೆ, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರಿಗೆ ಅವಕಾಶ ನೀಡಲು ಪೀಠವು ಶಿಕ್ಷೆ ವಿಧಿಸುವುದನ್ನು 30 ದಿನಗಳವರೆಗೆ ತಡೆಹಿಡಿದಿದೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐಪಿಎಸ್ ಅಧಿಕಾರಿ ವಿರುದ್ಧ ಕ್ರಿಕೆಟಿಗ ಧೋನಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

2014ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್‌ ದಂಧೆಯಲ್ಲಿ ತಮ್ಮನ್ನು ಹೆಸರಿಸಿದ್ದಕ್ಕಾಗಿ 100 ಕೋಟಿ ರೂ. ನಷ್ಟ ಪರಿಹಾರ ಕೋರಿ ಧೋನಿ ಅವರು ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ನ್ಯಾಯಾಂಗದ ವಿರುದ್ಧ ಅವರು ಮಾಡಿದ ಟೀಕೆಗಳಿಗಾಗಿ ಸಂಪತ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಧೋನಿ ಕೋರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT