ವಿನೇಶ್ ಫೋಗಟ್ - ಭ್ರಿಜ್‌ ಭೂಷಣ್‌ 
ಕ್ರೀಡೆ

WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್‌ ಭೂಷಣ್‌ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆ

ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್...

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್ ಅವರು ಬುಧವಾರ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕ್ರೀಡಾ ಆಡಳಿತಾಧಿಕಾರಿ ಮತ್ತು ಬಿಜೆಪಿ ಸಂಸದ ತಿರಸ್ಕರಿಸಿದ್ದಾರೆ.

ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ನಂತರ ಡಬ್ಲ್ಯುಎಫ್‌ಐ ಜೊತೆ ಭಿನ್ನಾಭಿಪ್ರಾಯ ಹೊಂದಿರುವ ವಿನೇಶ್ ಅವರು, ಲಖನೌದ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತುದಾರರು ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆದರೆ ತಾನು ಅಂತಹ ಶೋಷಣೆಯನ್ನು ಎಂದಿಗೂ ಎದುರಿಸಲಿಲ್ಲ ಎಂದು 28 ವರ್ಷದ ಯುವತಿ ವಿನೇಶ್ ಸ್ಪಷ್ಟಪಡಿಸಿದ್ದಾರೆ. ಇಂದು ಬಿಜೆಪಿ ಸಂಸದನ ವಿರುದ್ಧ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಧರಣಿಯಲ್ಲಿ WFI ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಕುಸ್ತಿಪಟು ಹಾಜರಿದ್ದರು ಎಂದು ಹೇಳಿದ್ದಾರೆ.

ಕೆಲ ಕೋಚ್‌ಗಳು ಒಕ್ಕೂಟದ ಬೆಂಬಲದಿಂದ ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಕುಸ್ತಿಗೆ ಬರುವ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ. ಕುಸ್ತಿ ಒಕ್ಕೂಟದ ಅಧ್ಯಕ್ಷರೇ ಅದೆಷ್ಟೋ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿನೇಶ್‌ ಫೋಗಟ್‌ ಆರೋಪಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನ ಪುರುಷರ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮೆರೆದ ಬಜರಂಗ್‌ ಪೂನಿಯಾ ಕೂಡ ಈ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಈ ವಿಚಾರದಲ್ಲಿ ತಮಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT