ಚೆಟ್ರಿ ಬಳಗಕ್ಕೆ ಭರ್ಜರಿ ಜಯ 
ಕ್ರೀಡೆ

ಸ್ಯಾಫ್ ಫುಟ್‌ಬಾಲ್‌ ಟೂರ್ನಿ: ಲೆಬನಾನ್‌ ಮಣಿಸಿ ಫೈನಲ್‌ಗೆ ಭಾರತ ಲಗ್ಗೆ

ಸ್ಯಾಫ್ ಫುಟ್‌ಬಾಲ್‌ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಲೆಬನಾನ್‌ ತಂಡವನ್ನು ಮಣಿಸಿದ ಚೆಟ್ರಿ ನೇತೃತ್ವದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

ಬೆಂಗಳೂರು: ಸ್ಯಾಫ್ ಫುಟ್‌ಬಾಲ್‌ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಲೆಬನಾನ್‌ ತಂಡವನ್ನು ಮಣಿಸಿದ ಚೆಟ್ರಿ ನೇತೃತ್ವದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ಸೇರಿದ್ದ ಸುಮಾರು 20 ಸಾವಿರ ಪ್ರೇಕ್ಷಕರನ್ನು ಮೈನವಿರೇಳಿಸುವಂತೆ ಮಾಡಿದ ಆತಿಥೇಯ ತಂಡ, ದಾಖಲೆಯ 13ನೇ ಬಾರಿಗೆ ಪ್ರಶಸ್ತಿ ಸುತ್ತು ತಲುಪಿದೆ. ಪೆನಾಲ್ಟಿ ಶೂಟೌಟ್‌ನಲ್ಲಿ ಲೆಬನಾನ್‌ ತಂಡವನ್ನು 4–2 ರಲ್ಲಿ ಮಣಿಸಿದ ಭಾರತ ತಂಡ, ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಫೈನಲ್ ಪ್ರವೇಶಿಸಿತು. ನಿಗದಿತ ಹಾಗೂ ಹೆಚ್ಚುವರಿ ಅವಧಿಯ ಆಟದಲ್ಲಿ ಗೋಲು ದಾಖಲಾಗದ ಕಾರಣ ಪೆನಾಲ್ಟಿ ಶೂಟೌಟ್‌ ಮೊರೆಹೋಗಲಾಯಿತು. ಭಾರತ ತಂಡದ ಪರ ನಾಯಕ ಸುನಿಲ್ ಚೆಟ್ರಿ, ಅನ್ವರ್‌ ಅಲಿ, ಮಹೇಶ್‌ ಸಿಂಗ್‌ ಮತ್ತು ಉದಾಂತ ಸಿಂಗ್‌ ಅವರು ಶೂಟೌಟ್‌ನಲ್ಲಿ ಚೆಂಡನ್ನು ಗುರಿ ಸೇರಿಸಿದರು.

ಲೆಬನಾನ್‌ ತಂಡದ ಪರ ಹಸನ್‌ ಮತೂಕ್‌ ಅವರ ಮೊದಲ ಕಿಕ್ಅನ್ನು ಭಾರತದ ಗೋಲ್‌ಕೀಪರ್‌ ಗುರುಪ್ರೀತ್‌ ಸಿಂಗ್‌ ಸಂಧು ಎಡಕ್ಕೆ ನೆಗೆದು ತಡೆದರು. ಎರಡು ಮತ್ತು ಮೂರನೇ ಕಿಕ್‌ಗಳಲ್ಲಿ ಗೋಲುಗಳು ಬಂದವು. ಖಲೀಲ್‌ ಬದೆರ್‌ ಅವರ ನಾಲ್ಕನೇ ಕಿಕ್‌ನಲ್ಲಿ ಚೆಂಡು ಗೋಲ್‌ಪೋಸ್ಟ್‌ ಮೇಲಿಂದ ಹೊರಕ್ಕೆ ಹೋಗುತ್ತಿದ್ದಂತೆಯೇ, ಭಾರತದ ಆಟಗಾರರು ಸಂಭ್ರಮಿಸಿದರು. ಪ್ರೇಕ್ಷಕರು ಕುಣಿದು, ಗೆಲುವಿನ ಕೇಕೆ ಹಾಕಿದರು.  

13ನೇ ಬಾರಿ ಫೈನಲ್‌ ಪ್ರವೇಶ 
ಭಾರತ ತಂಡ ಸ್ಯಾಫ್ ಚಾಂಪಿಯನ್‌ಷಿಪ್‌ನಲ್ಲಿ 13 ನೇ ಬಾರಿ ಫೈನಲ್ ಪ್ರವೇಶಿಸಿದೆ. ಒಟ್ಟಾರೆಯಾಗಿ ಇದು 14ನೇ ಟೂರ್ನಿ ಆಗಿದ್ದು, ಒಮ್ಮೆ ಮಾತ್ರ ಪ್ರಶಸ್ತಿ ಸುತ್ತು ತಲುಪಲು ವಿಫಲವಾಗಿತ್ತು. 1995 ರಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಭಾರತ ತಂಡ 8 ಬಾರಿ ಚಾಂಪಿಯನ್ ಹಾಗೂ 4 ಸಲ ರನ್ನರ್ಸ್ ಆಪ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT