ಭಾರತೀಯ ಫುಟ್ಬಾಲ್ ತಂಡ 
ಕ್ರೀಡೆ

ಬಹುಮಾನದ ಹಣದಲ್ಲಿ ಒಡಿಶಾ ರೈಲು ದುರಂತ ಸಂತ್ರಸ್ತರ ನಿಧಿಗೆ 20 ಲಕ್ಷ ರೂ. ದೇಣಿಗೆ ನೀಡಿದ ಭಾರತ ಫುಟ್ಬಾಲ್ ತಂಡ

ಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು.

ನವದೆಹಲಿ: ಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಇದಾದ ಬಳಿಕ ಭಾರತ ಫುಟ್ಬಾಲ್ ತಂಡ ತೆಗೆದುಕೊಂಡ ನಿರ್ಧಾರ ಅಭಿಮಾನಿಗಳ ಮನ ಗೆದ್ದಿದೆ.

ಕೋಚ್ ಇಗೊರ್ ಸ್ಟಿಮ್ಯಾಕ್ ನೇತೃತ್ವದ ಭಾರತೀಯ ಫುಟ್ಬಾಲ್ ತಂಡವು ಒಡಿಶಾ ದುರಂತದ ಸಂತ್ರಸ್ತರಿಗೆ ಬಹುಮಾನದ 20 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದೆ. ಈ ಬಗ್ಗೆ ಭಾರತ ಫುಟ್ಬಾಲ್ ತಂಡ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

ಭಾರತೀಯ ಫುಟ್ಬಾಲ್ ತಂಡ ಟ್ವೀಟ್ ನಲ್ಲಿ 'ನಮ್ಮ ವಿಜಯದ ನಂತರ ತಂಡಕ್ಕೆ ಬಹುಮಾನದ ಹಣವನ್ನು ನೀಡಿದ ಒಡಿಶಾ ಸರ್ಕಾರಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಇದಾದ ನಂತರ, ಈ ತಿಂಗಳ ಆರಂಭದಲ್ಲಿ ರೈಲು ಅಪಘಾತದಲ್ಲಿ ದುರದೃಷ್ಟವಶಾತ್ ಪ್ರಾಣಹಾನಿಗೆ ತುತ್ತಾಗಿರುವ ಕುಟುಂಬಗಳ ಪರಿಹಾರ ಮತ್ತು ಪುನರ್ವಸತಿಗಾಗಿ ನಾವು ಆ ಬಹುಮಾನದ ಹಣದಿಂದ 20 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವುದಾಗಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಜನರು ಅನುಭವಿಸಿದ ನಷ್ಟವನ್ನು ಯಾರೂ ಸರಿದೂಗಿಸಲು ಸಾಧ್ಯವಿಲ್ಲ, ಆದರೆ ಈ ಕಷ್ಟದ ಸಮಯದಲ್ಲಿ ಕುಟುಂಬಗಳಿಗೆ ಈ ಮೊತ್ತವು ಸಣ್ಣ ಸಹಾಯವನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಅದು ಹೇಳಿದೆ.

ಭಾನುವಾರ ನಡೆದ ಇಂಟರ್‌ಕಾಂಟಿನೆಂಟಲ್ ಕಪ್‌ನ ಫೈನಲ್‌ನಲ್ಲಿ ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯಾಂಜುವಾಲಾ ಚಾಂಗ್ಟೆ ಅವರ ಗೋಲುಗಳ ನೆರವಿನಿಂದ ಭಾರತ 2-0 ಗೋಲುಗಳಿಂದ ಲೆಬನಾನ್ ಅನ್ನು ಸೋಲಿಸುವ ಮೂಲಕ ಇಂಟರ್‌ಕಾಂಟಿನೆಂಟಲ್ ಕಪ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಭಾರತ ಎರಡನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದೆ. 2018ರಲ್ಲಿ ಕೀನ್ಯಾವನ್ನು ಸೋಲಿಸುವ ಮೂಲಕ ಭಾರತ ಟ್ರೋಫಿಯನ್ನು ಗೆದ್ದುಕೊಂಡಿತು. 2019ರಲ್ಲಿ ಭಾರತವು ನಾಲ್ಕನೇ ಮತ್ತು ಕೊನೆಯ ಸ್ಥಾನಕ್ಕೆ ತೃಪ್ತಿಗೊಂಡಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!