ಭಾರತದ ತಂಡ 
ಕ್ರೀಡೆ

ಏಷ್ಯನ್ ಗೇಮ್ಸ್ 2023: ಟ್ರ್ಯಾಪ್​ ಶೂಟಿಂಗ್​ ಪುರುಷರ ವಿಭಾಗದಲ್ಲಿ ಭಾರತದ ತಂಡಕ್ಕೆ ಚಿನ್ನದ ಪದಕ!

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನ ಭಾನುವಾರವೂ ಮುಂದುವರಿದಿದೆ. ಭಾನುವಾರ ನಡೆದ 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ​ ವಿಭಾಗದಲ್ಲಿ ಭಾರತದ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನ ಭಾನುವಾರವೂ ಮುಂದುವರಿದಿದೆ. ಭಾನುವಾರ ನಡೆದ 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ​ ವಿಭಾಗದಲ್ಲಿ ಭಾರತದ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ ಸಿಂಗ್ ಸಂಧು ಅವರ ತಂಡ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ.

ದಿನದ ಆರಂಭದಲ್ಲಿ ಪುರುಷರ 10,000 ಮೀ ಓಟದಲ್ಲಿ ಭಾರತದ ಲಾಂಗ್ ಡಿಸ್ಟೆನ್ಸ್ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದು ಬೀಗಿದ್ದರೆ, ಇದೀಗ 50 ಮೀಟರ್ ಟ್ರ್ಯಾಪ್​ ಶೂಟಿಂಗ್ ಪುರುಷರ​ ವಿಭಾಗದಲ್ಲಿ ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ ಸಿಂಗ್ ಸಂಧು ಅವರ ತಂಡ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ.

ಅಂತಿಮ ಸುತ್ತಿನಲ್ಲಿ ಕಿನಾನ್ ಚೆನೈ ಪರಿಪೂರ್ಣ 25ಕ್ಕೆ 25 ಅಂಕ ಗಳಿಸಿದರೆ, ಅಂತಿಮವಾಗಿ ಈ ಮೂವರು 361 ಅಂಕ ಕಲೆಹಾಕಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಈ ವಿಭಾಗದಲ್ಲಿ ಭಾರತ ಚಿನ್ನ ಗೆದ್ದರೆ, ಕುವೈತ್ ಮತ್ತು ಚೀನಾ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದವು. ಇದುವರೆಗೆ ನಡೆದಿರುವ ಸ್ಪರ್ಧೆಯಲ್ಲಿ ಭಾರತ ಕೇವಲ ಶೂಟಿಂಗ್‌ನಲ್ಲಿಯೇ 7 ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದುವರೆಗೆ ಭಾರತ ಒಟ್ಟಾರೆ 11 ಚಿನ್ನ ಸೇರಿದಂತೆ 41 ಪದಕಗಳನ್ನು ಗೆದ್ದಿದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ ಕೇವಲ ಶೂಟಿಂಗ್ ವಿಭಾಗ ಒಂದರಲ್ಲೇ 7 ಚಿನ್ನ, 9 ಬೆಳ್ಳಿ, 5 ಕಂಚು ಸೇರಿದಂತೆ ಒಟ್ಟು 21 ಪದಕಗಳು ಬಂದಿವೆ. ಇನ್ನಷ್ಟು ಬರುವ ನಿರೀಕ್ಷೆಗಳಿವೆ.

ಈ ಬಾರಿ ಭಾರತದ ಅಥ್ಲೀಟ್‌ಗಳು ಏಷ್ಯಾಡ್‌ನಿಂದ 100 ಪದಕ ಗೆಲ್ಲುವ ಗುರಿ ಹೊಂದಿದ್ದಾರೆ. ಭಾರತೀಯರು ಸದ್ಯ 41 ಪದಕಗಳನ್ನು ಗೆದ್ದಿದ್ದಾರೆ. ಅವರು ಸಾಗುತ್ತಿರುವ ರೀತಿಯನ್ನು ನೋಡಿದರೆ ಉಳಿದ ಕ್ರೀಡಾಕೂಟಗಳು ಚಿನ್ನವನ್ನು ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ. ಇದಕ್ಕೂ ಮೊದಲು ಜಕಾರ್ತಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಅತಿ ಹೆಚ್ಚು 16 ಚಿನ್ನ ಗೆದ್ದಿತ್ತು. ಈ ಬಾರಿ ಆ ದಾಖಲೆ ಮುರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT