ಪಾರುಲ್ ಚೌಧರಿ-ಅನ್ನು ರಾಣಿ 
ಕ್ರೀಡೆ

ಏಷ್ಯನ್ ಗೇಮ್ಸ್‌: ಮುಂದುವರೆದ ಭಾರತದ ಪದಕ ಬೇಟೆ; ಇಂದು 2 ಚಿನ್ನ, 2 ಬೆಳ್ಳಿ, 2 ಕಂಚು; 69ಕ್ಕೇರಿದ ಪದಕ ಸಂಖ್ಯೆ!

2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್ ಪಾರುಲ್ ಚೌಧರಿ ಹಾಗೂ ಜಾವೆಲಿನ್ ಥ್ರೋನಲ್ಲಿ ಅನ್ನು ರಾಣಿ ಚಿನ್ನದ ಪದಕ ಗೆದ್ದಿದ್ದಾರೆ.

2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್ ಪಾರುಲ್ ಚೌಧರಿ 5000 ಮೀ ಮಹಿಳೆಯರ ಫೈನಲ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 5000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ 28 ವರ್ಷದ ಪಾರುಲ್, ಜಪಾನ್‌ನ ರಿರಿಕಾ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದರು.

ಸೋಮವಾರ ನಡೆದ ಮಹಿಳೆಯರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ನಂತರ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪಾರುಲ್ ಚೌಧರಿ ಅವರಿಗೆ ಇದು ಎರಡನೇ ಪದಕವಾಗಿದೆ. ಹ್ಯಾಂಗ್‌ಝೌನಲ್ಲಿ ನಡೆದ ಪದಕ ಪಟ್ಟಿಯಲ್ಲಿ ಭಾರತದ ಕ್ರೀಡಾಪಟುಗಳು ಇದುವರೆಗೆ 15 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಚಿನ್ನಕ್ಕೆ ಮುತ್ತಿದ್ದ ಅನ್ನು ರಾಣಿ
ಅನ್ನು ರಾಣಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಮಹಿಳೆಯರ ಜಾವೆಲಿನ್ ಥ್ರೋನಲ್ಲಿ ಚಿನ್ನವನ್ನು ಗಳಿಸಿದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಅವರ ಅತ್ಯುತ್ತಮ 62.92 ಮೀಟರ್ ಎಸೆತವು ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮೊದಲ ಚಿನ್ನವಾಗಿ ಮೈಲಿಗಲ್ಲು ಸ್ಥಾಪಿಸಿದೆ.

800 ಮೀ ಓಟದಲ್ಲಿ ಭಾರತಕ್ಕೆ ಬೆಳ್ಳಿ
ಏಷ್ಯನ್ ಗೇಮ್ಸ್ 2023ರ ಪುರುಷರ 800 ಮೀ ಓಟದಲ್ಲಿ ಮೊಹಮ್ಮದ್ ಅಫ್ಸಲ್ ಪುಲಿಕಲಕತ್ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. 

ಬಾಕ್ಸಿಂಗ್ ನಲ್ಲಿ ಎರಡು ಕಂಚು
ಭಾರತದ ಮೂವರು ಬಾಕ್ಸರ್‌ಗಳಾದ ಲೊವ್ಲಿನಾ ಬೊರ್ಗೊಹೈನ್, ಪರ್ವೀನ್ ಹೂಡಾ ಅವರು ಈಗಾಗಲೇ ಪದಕವನ್ನು ಖಚಿತ ಪಡಿಸಿದ್ದು ಪ್ರೀತಿ ಪವಾರ್ ಮತ್ತು ನಿಖತ್ ಜರೀನ್ ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.

ಅಥ್ಲೆಟಿಕ್ಸ್: 400 ಮೀಟರ್ ಹರ್ಡಲ್ಸ್‌ನಲ್ಲಿ ವಿತ್ಯಾ ರಾಮರಾಜ್ ಗೆ ಕಂಚಿನ ಪದಕ
ವಿತ್ಯಾ ರಾಮರಾಜ್ ಏಷ್ಯನ್ ಗೇಮ್ಸ್ 2023 ರ ಮಹಿಳೆಯರ 400 ಮೀಟರ್ ಹರ್ಡಲ್ಸ್ ಫೈನಲ್‌ನಲ್ಲಿ 55.68 ಸೆಕೆಂಡುಗಳಲ್ಲಿ ಕಂಚಿನ ಪದಕ ಗೆದ್ದರು. 25ರ ಹರೆಯದ ಭಾರತೀಯ ಹರ್ಡಲರ್ ಸೋಮವಾರ ಹೀಟ್ಸ್‌ನಲ್ಲಿ ಓಟದ ವೇಳೆ ಭಾರತದ ಟ್ರ್ಯಾಕ್ ಮತ್ತು ಫೀಲ್ಡ್ ದಂತಕಥೆ ಪಿಟಿ ಉಷಾ ಅವರ 400 ಮೀಟರ್ ಹರ್ಡಲ್ಸ್ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿದರು.

2023ರ ಏಷ್ಯನ್ ಗೇಮ್ಸ್ ಭಾರತ ಇಲ್ಲಿಯವರೆಗೂ ಒಟ್ಟು 69 ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ನಿರ್ಮಿಸಿದೆ. 15 ಚಿನ್ನ, 26 ಬೆಳ್ಳಿ ಮತ್ತು 28 ಕಂಚಿನ ಪದಕ ಗೆದ್ದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT