ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳು 
ಕ್ರೀಡೆ

ಏಷ್ಯನ್ ಗೇಮ್ಸ್ 2023: ಚಿನ್ನ ಗೆದ್ದ ನೀರಜ್ ಚೋಪ್ರಾ, ಪುರುಷರ ರಿಲೇ ತಂಡ; ಹಾಕಿ ಫೈನಲ್ ಗೆ ಭಾರತ ಪುರುಷರ ತಂಡ ಲಗ್ಗೆ!

2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದೆ. ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ.

2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದೆ. ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ.

ಪುರುಷರ 4X400M ರಿಲೇನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಫೈನಲ್ ನಲ್ಲಿ ಮುಹಮ್ಮದ್ ಅನಾಸ್ ಯಾಹಿಯಾ, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ವರಿಯಥೋಡಿ, ರಾಜೇಶ್ ರಮೇಶ್ 3:01.58 ಟೈಮಿಂಗ್‌ನೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಬೇಟೆಯಾಡಿದರು. 

ಮಹಿಳೆಯರ 4X400M ರಿಲೇನಲ್ಲಿ ಭಾರತಕ್ಕೆ ಬೆಳ್ಳಿ. ವಿತ್ಯಾ ರಾಮರಾಜ್, ಐಶ್ವರ್ಯ ಕೈಲಾಶ್ ಮಿಶ್ರಾ, ಪ್ರಾಚಿ, ಶುಭಾ ವೆಂಕಟೇಶನ್ ತಂಡ ಫೈನಲ್‌ನಲ್ಲಿ 2:03.75 ಟೈಮಿಂಗ್ ನೊಂದಿಗೆ ಎರಡನೇ ಸ್ಥಾನ ಪಡೆದರು.

ಪುರುಷರ ಹಾಕಿ ವಿಭಾಗದಲ್ಲಿ ಭಾರತ ತಂಡ ದಕ್ಷಿಣ ಕೊರಿಯಾವನ್ನು 5-3 ಗೋಲುಗಳಿಂದ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಹಾಕಿಯಲ್ಲಿ ಪದಕವೊಂದು ಖಚಿತವಾದಂತಾಗಿದೆ. 

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 18 ಚಿನ್ನ, 31 ಬೆಳ್ಳಿ ಮತ್ತು 32 ಕಂಚಿನ ಪದಕದೊಂದಿಗೆ 81 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

ಇನ್ನು ಆರ್ಚರಿಯಲ್ಲಿ ಓಜಸ್ ಡಿಯೋಟಾಲೆ ಮತ್ತು ಜ್ಯೋತಿ ಸುರೇಖಾ ವೆನ್ನಂ ಮಿಶ್ರ ತಂಡ 159 ಅಂಕಗಳೊಂದಿಗೆ ಕೋರಿಯಾ ತಂಡವನ್ನು ಮಣಿಸಿ ಚಿನ್ನದ ಪದಕ ಗೆದ್ದುಕೊಂಡಿದೆ. ಇನ್ನು ಕೋರಿಯಾ ತಂಡ 158 ಅಂಕಗಳನ್ನು ಸಂಪಾದಿಸಿ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT