ಏಷ್ಯನ್ ಗೇಮ್ಸ್ ನಲ್ಲಿ ಭಾರತದ 100 ಪದಕಗಳ ಭೇಟಿ ಸಾಂದರ್ಭಿಕ ಚಿತ್ರ 
ಕ್ರೀಡೆ

ಏಷ್ಯನ್ ಗೇಮ್ಸ್ 2023: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ, ಭಾರತ 100 ಪದಕಗಳ ಸಾಧನೆ! ಪ್ರಧಾನಿ ಮೋದಿ ಅಭಿನಂದನೆ

ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು. 

ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, "ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ. 

ಈ ಸಾಧನೆಗೆ ಭಾರತೀಯ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.  ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಬುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT