ವಿನೇಶ್ ಪೋಗಟ್ PTI
ಕ್ರೀಡೆ

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್‌ ಟಿಕೆಟ್!

ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್ ನಲ್ಲಿ ನಡೆಯುತ್ತಿರುವ ಏಷ್ಯನ್ ಒಲಿಂಪಿಕ್ ಕ್ವಾಲಿಫೈಯರ್ ನ ಸೆಮಿಫೈನಲ್ ನಲ್ಲಿ ಕಜಕಿಸ್ತಾನದ ಲಾರಾ ಗಣಿಕ್ಯಾಜಿ ಅವರನ್ನು ಸೋಲಿಸುವ ಮೂಲಕ ವಿನೇಶ್ ಈ ಸಾಧನೆ ಮಾಡಿದ್ದಾರೆ. 50 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ವಿನೇಶ್ 10-0 ರಿಂದ ಗಾಣಿಕ್ಯಾಜಿ ಅವರನ್ನು ಸೋಲಿಸಿದರು. ಈ ಪಂದ್ಯಾವಳಿಯ ಫೈನಲ್‌ಗೆ ತಲುಪುವ ಕುಸ್ತಿಪಟುಗಳು ತಮ್ಮ ದೇಶಕ್ಕೆ ಪ್ಯಾರಿಸ್ ಒಲಿಂಪಿಕ್ಸ್ 2024 ರ ಕೋಟಾವನ್ನು ಪಡೆಯುತ್ತಾರೆ.

ಈ ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲಿ ವಿನೇಶ್ ಒಂದು ನಿಮಿಷ 39 ಸೆಕೆಂಡುಗಳ ಕಾಲ ನಡೆದ ಪಂದ್ಯದಲ್ಲಿ ಕೊರಿಯಾದ ಪ್ರತಿಸ್ಪರ್ಧಿ ಮಿರಾನ್ ಚಿಯೋನ್ ಅವರನ್ನು ಸೋಲಿಸಿದರು. ಮುಂದಿನ ಪಂದ್ಯದಲ್ಲಿ ಅವರು ಕಾಂಬೋಡಿಯಾದ ಎಸ್ಮಾನಂಗ್ ಡಿಟ್ ಅವರನ್ನು 67 ಸೆಕೆಂಡುಗಳಲ್ಲಿ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದರು. ಈಗ ಸೆಮಿಫೈನಲ್‌ನಲ್ಲಿ ಗೆದ್ದು ಅಮೋಘ ಸಾಧನೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ಪಟಿಯಾಲದಲ್ಲಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ 50ರ ಜೊತೆಗೆ ವಿನೇಶ್ 53 ಕೆಜಿ ತೂಕ ವಿಭಾಗದಲ್ಲಿ ಭಾಗವಹಿಸಿದ್ದರು. 53 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಸೋತರು. ಆದರೆ 50 ಕೆಜಿ ತೂಕ ವಿಭಾಗದಲ್ಲಿ ಗೆಲುವಿನಿಂದಾಗಿ ವಿನೇಶ್ ಏಷ್ಯನ್ ಒಲಿಂಪಿಕ್ ಕ್ವಾಲಿಫೈಯರ್‌ಗೆ ಪ್ರವೇಶ ಪಡೆದರು. 50 ಕೆಜಿ ವಿಭಾಗದ ಫೈನಲ್‌ನಲ್ಲಿ ಅವರು ಶಿವಾನಿ ಅವರನ್ನು ಸೋಲಿಸಿದರು.

ಮತ್ತೊಂದಡೆ ಪ್ಯಾರಿಸ್ ಒಲಿಂಪಿಕ್ಸ್‌ ಟಿಕೆಟ್ ಪಡೆದ ಅಂಶು ಮಲಿಕ್

ಅಂಶು ಮಲಿಕ್ ಕೂಡ ಮಹಿಳೆಯರ 57 ಕೆಜಿ ತೂಕ ವಿಭಾಗದಲ್ಲಿ ಭಾರತದ ಪರ ಕೋಟಾವನ್ನು ಪಡೆದುಕೊಂಡಿದ್ದಾರೆ. ಏಷ್ಯನ್ ಒಲಿಂಪಿಕ್ ಕ್ವಾಲಿಫೈಯರ್‌ನ ಸೆಮಿಫೈನಲ್‌ನಲ್ಲಿ ಅಂಶು ಉಜ್ಬೇಕಿಸ್ತಾನ್ ಕುಸ್ತಿಪಟುವನ್ನು 10-0 ಅಂತರದಿಂದ ಸೋಲಿಸಿದರು. ಆದಾಗ್ಯೂ, ಮಾನ್ಸಿ 62 ಕೆಜಿ ತೂಕ ವಿಭಾಗದ ಸೆಮಿಫೈನಲ್‌ನಲ್ಲಿ ಸೋಲನ್ನು ಎದುರಿಸಬೇಕಾಯಿತು ಮತ್ತು ಅವರು ಕೋಟಾವನ್ನು ಸಾಧಿಸುವ ಅವಕಾಶವನ್ನು ಕಳೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ