ಭಾರತೀಯ ಹಾಕಿ ತಂಡ 
ಕ್ರೀಡೆ

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ, ಅದ್ದೂರಿ ಸ್ವಾಗತ!

'ದೇಶಕ್ಕಾಗಿ ಗೆದ್ದಿರುವುದು ದೊಡ್ಡ ವಿಷಯವಾಗಿದೆ. ಫೈನಲ್ ಪ್ರವೇಶಿಸಲು ಪ್ರಯತ್ನಿಸಿದೇವು, ಆದರೆ, ನಮ್ಮ ಕನಸು ನನಸು ಆಗಲಿಲ್ಲ. ಆದರೆ ಬರಿಗೈಯಲ್ಲಿ ಹಿಂದಿರುಗಲಿಲ್ಲ'

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿತ ಪದಕ ವಿಜೇತ ಭಾರತೀಯ ಪುರುಷರ ಹಾಕಿ ತಂಡವು ಸ್ವದೇಶಕ್ಕೆ ಆಗಮಿಸಿದೆ. ಹರ್ಮಪ್ರೀತ್ ಸಿಂಗ್ ನೇತೃತ್ವದ ತಂಡ ಶನಿವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅದ್ದೂರಿ ಸ್ವಾಗತ ನೀಡಲಾಯಿತು.

ಪ್ರತಿಯೊಬ್ಬ ಆಟಗಾರರಿಗೂ ಶಾಲು, ಹೂವಿನ ಹಾರ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಆಟಗಾರರು ತಮ್ಮ ಪದಕಗಳನ್ನು ಕ್ಯಾಮರಾಗೆ ತೋರಿಸುವ ಮೂಲಕ ವಿಶಿಷ್ಟವಾಗಿ ಗೆಲುವನ್ನು ಆಚರಿಸಿದರು. ಕೆಲವು ಆಟಗಾರರು ಡ್ರಮ್ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕಿ ನರ್ತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪದಕ, ಪದಕನೇ, ದೇಶಕ್ಕಾಗಿ ಗೆದ್ದಿರುವುದು ದೊಡ್ಡ ವಿಷಯವಾಗಿದೆ. ಫೈನಲ್ ಪ್ರವೇಶಿಸಲು ಪ್ರಯತ್ನಿಸಿದೇವು, ಆದರೆ, ನಮ್ಮ ಕನಸು ನನಸು ಆಗಲಿಲ್ಲ. ಆದರೆ ಬರಿಗೈಯಲ್ಲಿ ಹಿಂದಿರುಗಲಿಲ್ಲ. ಪದಕ ಗೆದ್ದು ವಾಪಸ್ಸಾಗಿದ್ದು, ಇದಕ್ಕಾಗಿ ಅಪಾರ ಬೆಂಬಲ ನೀಡಿದ ಕೇಂದ್ರ ಸರ್ಕಾರ, SAI ಮತ್ತು ಒಡಿಶಾ ಸರ್ಕಾರಕ್ಕೆ ಧನ್ಯವಾದ ಹೇಳುವುದಾಗಿ ತಿಳಿಸಿದರು.

ಪಿಆರ್ ಶ್ರೀಜೇಶ್ ಅಂತರಾಷ್ಟ್ರೀಯ ಹಾಕಿ ಕ್ರೀಡೆಯಿಂದ ನಿವೃತ್ತಿಯಾಗುತ್ತಿರುವ ಕಾರಣ ಈ ಗೆಲುವನ್ನು "ಭಾವನಾತ್ಮಕ ಕ್ಷಣ" ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT