ಭಾರತೀಯ ಹಾಕಿ ತಂಡ 
ಕ್ರೀಡೆ

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ, ಅದ್ದೂರಿ ಸ್ವಾಗತ!

'ದೇಶಕ್ಕಾಗಿ ಗೆದ್ದಿರುವುದು ದೊಡ್ಡ ವಿಷಯವಾಗಿದೆ. ಫೈನಲ್ ಪ್ರವೇಶಿಸಲು ಪ್ರಯತ್ನಿಸಿದೇವು, ಆದರೆ, ನಮ್ಮ ಕನಸು ನನಸು ಆಗಲಿಲ್ಲ. ಆದರೆ ಬರಿಗೈಯಲ್ಲಿ ಹಿಂದಿರುಗಲಿಲ್ಲ'

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿತ ಪದಕ ವಿಜೇತ ಭಾರತೀಯ ಪುರುಷರ ಹಾಕಿ ತಂಡವು ಸ್ವದೇಶಕ್ಕೆ ಆಗಮಿಸಿದೆ. ಹರ್ಮಪ್ರೀತ್ ಸಿಂಗ್ ನೇತೃತ್ವದ ತಂಡ ಶನಿವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅದ್ದೂರಿ ಸ್ವಾಗತ ನೀಡಲಾಯಿತು.

ಪ್ರತಿಯೊಬ್ಬ ಆಟಗಾರರಿಗೂ ಶಾಲು, ಹೂವಿನ ಹಾರ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಆಟಗಾರರು ತಮ್ಮ ಪದಕಗಳನ್ನು ಕ್ಯಾಮರಾಗೆ ತೋರಿಸುವ ಮೂಲಕ ವಿಶಿಷ್ಟವಾಗಿ ಗೆಲುವನ್ನು ಆಚರಿಸಿದರು. ಕೆಲವು ಆಟಗಾರರು ಡ್ರಮ್ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕಿ ನರ್ತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪದಕ, ಪದಕನೇ, ದೇಶಕ್ಕಾಗಿ ಗೆದ್ದಿರುವುದು ದೊಡ್ಡ ವಿಷಯವಾಗಿದೆ. ಫೈನಲ್ ಪ್ರವೇಶಿಸಲು ಪ್ರಯತ್ನಿಸಿದೇವು, ಆದರೆ, ನಮ್ಮ ಕನಸು ನನಸು ಆಗಲಿಲ್ಲ. ಆದರೆ ಬರಿಗೈಯಲ್ಲಿ ಹಿಂದಿರುಗಲಿಲ್ಲ. ಪದಕ ಗೆದ್ದು ವಾಪಸ್ಸಾಗಿದ್ದು, ಇದಕ್ಕಾಗಿ ಅಪಾರ ಬೆಂಬಲ ನೀಡಿದ ಕೇಂದ್ರ ಸರ್ಕಾರ, SAI ಮತ್ತು ಒಡಿಶಾ ಸರ್ಕಾರಕ್ಕೆ ಧನ್ಯವಾದ ಹೇಳುವುದಾಗಿ ತಿಳಿಸಿದರು.

ಪಿಆರ್ ಶ್ರೀಜೇಶ್ ಅಂತರಾಷ್ಟ್ರೀಯ ಹಾಕಿ ಕ್ರೀಡೆಯಿಂದ ನಿವೃತ್ತಿಯಾಗುತ್ತಿರುವ ಕಾರಣ ಈ ಗೆಲುವನ್ನು "ಭಾವನಾತ್ಮಕ ಕ್ಷಣ" ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT