ಗುಕೇಶ್  online desk
ಕ್ರೀಡೆ

Chess champion Gukesh ಗೆಲುವಿನ ಬಗ್ಗೆ ರಷ್ಯಾ ಕ್ಯಾತೆ! ತನಿಖೆ ನಡೆಸಲು ಪಟ್ಟು!

18 ವರ್ಷದ ಗುಕೇಶ್ ಇತಿಹಾಸ ನಿರ್ಮಿಸುತ್ತಿದ್ದಂತೆಯೇ ಈ ಬಗ್ಗೆ ರಷ್ಯಾ ಕ್ಯಾತೆ ತೆಗೆದಿದೆ. ಗುಕೇಶ್ ಗೆಲುವು ಅನುಮಾನಾಸ್ಪದವಾಗಿದೆ. ಚೀನಾದ ಹಾಲಿ ಚಾಂಪಿಯನ್ ಲಿರೆನ್ ಉದ್ದೇಶಪೂರ್ವಕವಾಗಿ ಪಂದ್ಯ ಸೋತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಿಂಗಪೂರ್: ಚೀನಾದ ಚಾಂಪಿಯನ್ ನ್ನು ಮಣಿಸಿ ಚೆಸ್ ಚಾಂಪಿಯನ್ ಶಿಪ್ ನ್ನು ಮುಡಿಗೇರಿಸಿಕೊಂಡ ಗುಕೇಶ್ ಗೆಲುವನ್ನು ಪ್ರಶ್ನಿಸಲಾಗುತ್ತಿದೆ.

18 ವರ್ಷದ ಗುಕೇಶ್ ಇತಿಹಾಸ ನಿರ್ಮಿಸುತ್ತಿದ್ದಂತೆಯೇ ಈ ಬಗ್ಗೆ ರಷ್ಯಾ ಕ್ಯಾತೆ ತೆಗೆದಿದೆ. ಗುಕೇಶ್ ಗೆಲುವು ಅನುಮಾನಾಸ್ಪದವಾಗಿದೆ. ಚೀನಾದ ಹಾಲಿ ಚಾಂಪಿಯನ್ ಲಿರೆನ್ ಉದ್ದೇಶಪೂರ್ವಕವಾಗಿ ಪಂದ್ಯ ಸೋತಿದ್ದಾರೆ ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಷ್ಯಾದ ಚೆಸ್ ಫೆಡರೇಶನ್ ಮುಖ್ಯಸ್ಥ ಆಂಡ್ರೇ ಫಿಲಾಟೊವ್ ಪಟ್ಟು ಹಿಡಿದಿದ್ದಾರೆ.

ಫಲಿತಾಂಶದ ಬಗ್ಗೆ ತನಿಖೆ ಮಾಡಲು ಫಿಲಾಟೊವ್ ಇಂಟರ್ನ್ಯಾಷನಲ್ ಚೆಸ್ ಫೆಡರೇಶನ್ (FIDE) ನ್ನು ಆಂಡ್ರೇ ಫಿಲಾಟೊವ್ ಕೇಳಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆ TASS ವರದಿ ಪ್ರಕಟಿಸಿದೆ.

"ಕೊನೆಯ ಪಂದ್ಯದ ಫಲಿತಾಂಶ ವೃತ್ತಿಪರರು ಮತ್ತು ಚೆಸ್ ಅಭಿಮಾನಿಗಳಲ್ಲಿ ದಿಗ್ಭ್ರಮೆಯನ್ನು ಉಂಟುಮಾಡಿತು. ನಿರ್ಣಾಯಕ ವಿಭಾಗದಲ್ಲಿ ಚೀನಾದ ಚೆಸ್ ಆಟಗಾರನ ಕ್ರಮಗಳು ಅತ್ಯಂತ ಅನುಮಾನಾಸ್ಪದವಾಗಿದೆ ಈ ಕಾರಣದಿಂದ FIDE ನಿಂದ ಪ್ರತ್ಯೇಕ ತನಿಖೆಯ ಅಗತ್ಯವಿದೆ," ಅವರು ಆಗ್ರಹಿಸಿದ್ದಾರೆ.

"ಡಿಂಗ್ ಲಿರೆನ್ ಇದ್ದ ಸ್ಥಾನವನ್ನು ಕಳೆದುಕೊಳ್ಳುವುದು ಪ್ರಥಮ ದರ್ಜೆ ಆಟಗಾರನಿಗೂ ಕಷ್ಟಕರವಾಗಿದೆ. ಪಂದ್ಯದಲ್ಲಿ ಚೀನಾದ ಚೆಸ್ ಆಟಗಾರನ ಸೋಲು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಮತ್ತು ಉದ್ದೇಶಪೂರ್ವಕವಾಗಿರುವಂತೆ ಕಾಣುತ್ತದೆ" ಎಂದು ಅವರು ಹೇಳಿದ್ದಾರೆ.

ಶ್ರೇಷ್ಠ ವಿಶ್ವನಾಥನ್ ಆನಂದ್ ಅವರ ಪರಂಪರೆಯನ್ನು ಮುಂದಕ್ಕೆ ತೆಗೆದುಕೊಂಡು, ಗುಕೇಶ್ ಐದು ಬಾರಿ ಚಾಂಪಿಯನ್ ಶಿಪ್ ಗೆದ್ದಿದ್ದ ಐಕಾನಿಕ್ ಆಟಗಾರನ ನಂತರ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?