ಸಂಜಯ್ ಸಿಂಗ್ (ಬಲಗಡೆ) 
ಕ್ರೀಡೆ

ನೂತನ ಆಡಳಿತ ಮಂಡಳಿ ಅಮಾನತು ಪ್ರಶ್ನಿಸಿ ಮುಂದಿನ ವಾರ ಕೋರ್ಟ್ ಮೆಟ್ಟಿಲೇರಲಿದೆ WFI

ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ)ನ ಆಡಳಿತ ಮಂಡಳಿಯನ್ನು ಅಮಾನತು ಮಾಡಿರುವ ಕೇಂದ್ರ ಕ್ರೀಡಾ ಸಚಿವಾಲಯದ ಕ್ರಮ ಪ್ರಶ್ನಿಸಿ ಮುಂದಿನ ವಾರ ನ್ಯಾಯಾಲಯದ ಮೊರೆ ಹೋಗಲು ಡಬ್ಲ್ಯುಎಫ್‌ಐ ನಿರ್ಧರಿಸಿದೆ ಮತ್ತು ಮುಂದಿನ ನಡೆ...

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ)ನ ಆಡಳಿತ ಮಂಡಳಿಯನ್ನು ಅಮಾನತು ಮಾಡಿರುವ ಕೇಂದ್ರ ಕ್ರೀಡಾ ಸಚಿವಾಲಯದ ಕ್ರಮ ಪ್ರಶ್ನಿಸಿ ಮುಂದಿನ ವಾರ ನ್ಯಾಯಾಲಯದ ಮೊರೆ ಹೋಗಲು ಡಬ್ಲ್ಯುಎಫ್‌ಐ ನಿರ್ಧರಿಸಿದೆ ಮತ್ತು ಮುಂದಿನ ನಡೆ ಬಗ್ಗೆ ಚರ್ಚಿಸಲು ಜನವರಿ 16 ರಂದು ದೆಹಲಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ಕರೆದಿದೆ.

ರಾಷ್ಟ್ರೀಯ ಕ್ರೀಡಾ ಸಂಹಿತೆ ಉಲ್ಲಂಘನೆ ಮತ್ತು WFI ಸಂವಿಧಾನ ಉಲ್ಲಂಘನೆಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ಡಿಸೆಂಬರ್ 24 ರಂದು ಕುಸ್ತಿ ಫೆಡರೇಶನ್ ನ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ.

"ನಮಗೆ ಸರಿಯಾಗಿ ಕಾರ್ಯನಿರ್ವಹಿಸುವ ಫೆಡರೇಶನ್ ಅಗತ್ಯವಿದೆ. ನಾವು ಮುಂದಿನ ವಾರ ಈ ವಿಷಯವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತೇವೆ. ನಾವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವುದರಿಂದ ಈ ಅಮಾನತು ಸ್ವೀಕಾರಾರ್ಹವಲ್ಲ ಎಂದು WFI ಅಧ್ಯಕ್ಷ ಸಂಜಯ್ ಸಿಂಗ್ ಹೇಳಿದ್ದಾರೆ. 

ನಾವು ಸಂವಿಧಾನ ಬದ್ಧವಾಗಿ ಚುನಾವಣೆ ನಡೆದು ಆಯ್ಕೆಯಾಗಿದ್ದೇವೆ. ಅದನ್ನು ಕ್ರೀಡಾ ಸಚಿವಾಲಯ ಕಡೆಗಣಿಸಲು ಹೇಗೆ ಸಾಧ್ಯ? ಅಮಾನತು ಮತ್ತು ಸ್ವತಂತ್ರ ಸಮಿತಿಯನ್ನು ನಾವು ಪರಿಗಣಿಸಲ್ಲ. ನಮ್ಮ ಸಮಿತಿಯೇ ಈಗಲೂ ಕಾರ್ಯನಿರ್ವಹಿಸುತ್ತಿದೆ. ಸಮಿತಿಯ ಸಭೆ ಕರೆದು, ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಆಯೋಜಿಸುತ್ತೇವೆ. ನಮ್ಮ ರಾಜ್ಯ ಸಮಿತಿಗಳು ಆಟಗಾರರನ್ನು ಕಳುಹಿಸದಿದ್ದರೆ ಸ್ವತಂತ್ರ ಸಮಿತಿ ಹೇಗೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಆಯೋಜಿಸುತ್ತದೆ ಎಂದು ಸಂಜಯ್‌ ಸಿಂಗ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

ಟಿ20 ವಿಶ್ವಕಪ್ ನಲ್ಲಿ ವಿವಾದಾತ್ಮಕ ನಿರ್ಧಾರ: ಸೂರ್ಯ ಕುಮಾರ್ ಯಾದವ್ ಕ್ಷಮೆಯಾಚನೆ!

SCROLL FOR NEXT