ಡಿಂಗ್ ಲಿರೆನ್ ಮಣಿಸಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ 
ಕ್ರೀಡೆ

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಮಣಿಸಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ರನ್ನು ಮಣಿಸುವ ಮೂಲಕ ಭಾರತದ ಉದಯೋನ್ಮುಖ ಚೆಸ್ ತಾರೆ ಆರ್ ಪ್ರಗ್ನಾನಂದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಬೆಂಗಳೂರು: ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ರನ್ನು ಮಣಿಸುವ ಮೂಲಕ ಭಾರತದ ಉದಯೋನ್ಮುಖ ಚೆಸ್ ತಾರೆ ಆರ್ ಪ್ರಗ್ನಾನಂದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್ ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರನ್ನು ಮಣಿಸಿದ ಚೆಸ್ ಪ್ರತಿಭೆ ರಮೇಶ್ ಬಾಬು ಪ್ರಗ್ನಾನಂದ ಅವರು ನಂ.1 ಸ್ಥಾನಕ್ಕೇರಿದ್ದಾರೆ. ಆ ಮೂಲಕ ಪ್ರಗ್ನಾನಂದ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ನಂ.1 ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ.

ನೆದರ್ಲ್ಯಾಂಡ್ ವಿಜ್ಕ್ ಆನ್ ಜೀನಲ್ಲಿ ಮಂಗಳವಾರ ನಡೆದ ಟಾಟಾ ಸ್ಟೀಲ್ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಭಾರತದ ಚೆಸ್ ಮಾಂತ್ರಿಕ  ಪ್ರಗ್ನಾನಂದ ಅವರು ವಿಶ್ವ ಚೆಸ್ ಚಾಂಪಿಯನ್ ಡಿಂಗ್ ಲಿರೆನ್ ಅವರನ್ನು ಸೋಲಿಸಿದರು. ಇದು 2024 ರ ಮೊದಲ ಸೂಪರ್ ಟೂರ್ನಮೆಂಟ್ ಆಗಿತ್ತು.

ಗೆಲುವಿನ ಕುರಿತು ಮಾತನಾಡಿರುವ ಪ್ರಗ್ನಾನಂದ, ಯಾವುದೇ ದಿನ, ನೀವು ಅಂತಹ ಪ್ರಬಲ ಆಟಗಾರನನ್ನು ಸೋಲಿಸಿದರೆ, ಅದು ಯಾವಾಗಲೂ ವಿಶೇಷವಾಗಿರುತ್ತದೆ ಏಕೆಂದರೆ ಅವರನ್ನು ಸೋಲಿಸುವುದು ತುಂಬಾ ಸುಲಭವಲ್ಲ. ಚೆಸ್ನಲ್ಲಿ ವಿಶ್ವ ಚಾಂಪಿಯನ್ ವಿರುದ್ಧ ಮೊದಲ ಬಾರಿಗೆ ಗೆದ್ದಿರುವುದು ಖುಷಿ ಕೊಟ್ಟಿದೆ ಎಂದು ಎಂದು ಅವರು ಹೇಳಿದರು.

“ಇದು ಒಳ್ಳೆಯದು. ಮೊದಲ ಮೂರು ಪಂದ್ಯಗಳು ಸಾಕಷ್ಟು ಆಸಕ್ತಿದಾಯಕವಾಗಿದ್ದವು. ನಾನು ಉತ್ತಮವಾಗಿ ಆಡುತ್ತಿದ್ದೇನೆ ಎಂದು ನಾನು ಭಾವಿಸುತ್ತೇನೆ ಆದರೆ ಕಳೆದ ವರ್ಷವೂ ಇದೇ ರೀತಿ ಆಗಿತ್ತು. ನಾನು ನಿಜವಾಗಿಯೂ ಉತ್ತಮವಾಗಿ ಆಡುತ್ತಿದ್ದ ಒಂದು ಹಂತವಿತ್ತು ಮತ್ತು ನಂತರ ನನ್ನ ಆಟವು ತುಂಬಾ ಕೆಟ್ಟದಾಗಿ ಕುಸಿಯಿತು, ಆದ್ದರಿಂದ ಪಂದ್ಯಾವಳಿಯ ಅಂತ್ಯದವರೆಗೆ ಶಕ್ತಿಯನ್ನು ಹೆಚ್ಚಿಸುವುದು ನಿಜವಾಗಿಯೂ ಮುಖ್ಯ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!