ಕೊಪಾ ಅಮೆರಿಕ ಪ್ರಶಸ್ತಿ ಗೆದ್ದ ಅರ್ಜೆಂಟೀನಾ  
ಕ್ರೀಡೆ

Copa America Final: ಕೊಲಂಬಿಯಾ ವಿರುದ್ಧ ಅರ್ಜೆಂಟಿನಾಗೆ ವಿರೋಚಿತ ಗೆಲುವು, ದಾಖಲೆಯ 16ನೇ ಬಾರಿಗೆ ಪ್ರಶಸ್ತಿ!

Copa America ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೊಲಂಬಿಯಾ ವಿರುದ್ಧ ಅರ್ಜೆಂಟಿನಾ 1-0 ಗೋಲಿನ ಅಂತರದ ವಿರೋಚಿತ ಗೆಲುವು ಸಾಧಿಸಿದ್ದು, ಆ ಮೂಲಕ ದಾಖಲೆಯ 16ನೇ ಬಾರಿಗೆ ಪ್ರಶಸ್ತಿ ಜಯಿಸಿದೆ.

ಫ್ಲೋರಿಡಾ: Copa America ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೊಲಂಬಿಯಾ ವಿರುದ್ಧ ಅರ್ಜೆಂಟಿನಾ 1-0 ಗೋಲಿನ ಅಂತರದ ವಿರೋಚಿತ ಗೆಲುವು ಸಾಧಿಸಿದ್ದು, ಆ ಮೂಲಕ ದಾಖಲೆಯ 16ನೇ ಬಾರಿಗೆ ಪ್ರಶಸ್ತಿ ಜಯಿಸಿದೆ.

ಸೋಮವಾರ ಬೆಳಗ್ಗೆ ನಡೆದ ಕೊಪಾ ಅಮೆರಿಕ(Copa America Final) ಫುಟ್‌ಬಾಲ್‌ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ಅರ್ಜೆಂಟೀನಾ ತಂಡ ಕೊಲಂಬಿಯಾ (Argentina vs Colombia) ವಿರುದ್ಧ 1-0 ಗೋಲುಗಳ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟವನ್ನು ಉಳಿಸಿಕೊಂಡಿದೆ.

ಬಿಕ್ಕಿ ಬಿಕ್ಕಿ ಅತ್ತ ಮೆಸ್ಸಿ

ಇನ್ನು ಈ ಫೈನಲ್ ಪಂದ್ಯದ ನಿರ್ಣಾಯಕ ಘಟದಲ್ಲಿ ತಂಡದ ಪ್ರಮುಖ ಆಟಗಾರ ಲಿಯೋನಲ್ ಮೆಸ್ಸಿ ಗಾಯಗೊಂಡು ಅನಿವಾರ್ಯವಾಗಿ ಹೊರಗುಳಿಯಬೇಕಾಯಿತು. ಈ ವೇಳೆ ಮೆಸ್ಸಿ ಬಿಕ್ಕಿ ಬಿಕ್ಕಿ ಅತ್ತರು. ಈ ಕುರಿತ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಮೆಸ್ಸಿ ಅನುಪಸ್ಥಿತಿಯಲ್ಲಿ ಕೊಲಂಬಿಯಾಗೆ ಗೋಲು ಗಳಿಸುವ ಸುವರ್ಣಾವಕಾಶವಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದೇ ಭಯ ಕೂಡ ಮೆಸ್ಸಿಗೂ ಇತ್ತು. ಇದೇ ಕಾರಣಕ್ಕೆ ಅವರು ಡಗೌಟ್ ನಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಸ್ವತಃ ಕೋಚ್ ಎಷ್ಟೇ ಸಮಾಧಾನ ಪಡಿಸಿದರೂ ಮೆಸ್ಸಿ ಸಮಾಧಾನವಾಗಲಿಲ್ಲ. ಅಂತಿಮವಾಗಿ ತಂಡ ಗೆಲುವು ಸಾಧಿಸಿದ ಬಳಿಕ ಮೆಸ್ಸಿ ಸಂಭ್ರಮಕ್ಕೆ ಕೊನೆಯೇ ಇರಲಿಲ್ಲ.

ಗೆಲುವಿನ ಗೋಲು ಭಾರಿಸಿದ ಲೌಟಾರೊ ಮಾರ್ಟಿನೆಜ್‌

ಎರಡನೇ ಹೆಚ್ಚುವರಿ ಅವಧಿಯಲ್ಲಿ ಅರ್ಜೆಂಟೀನಾ ತಂಡದ ಲೌಟಾರೊ ಮಾರ್ಟಿನೆಜ್‌ ಅವರು ಗೋಲು ಬಾರಿಸಿದರು. ಈ ಬಳಿಕ ಇತ್ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. ಮಾರ್ಟಿನೆಜ್‌ ಅವರ ಏಕೈಕ ಗೋಲು ಅರ್ಜೆಂಟೀನಾಗೆ ಪ್ರಶಸ್ತಿ ಗೆಲ್ಲಿಸಿಕೊಟ್ಟಿತು. 23 ವರ್ಷಗಳ ಬಳಿಕ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಆಡಲಿಳಿದಿದ್ದ ಕೊಲಂಬಿಯಾಗೆ ನಿರಾಸೆಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

ಎರಡು ಬಾರಿ ಪ್ರಜ್ಞಾಹೀನರಾದ ಮಾಜಿ ಉಪ ರಾಷ್ಟ್ರಪತಿ Jagdeep Dhankhar, ಆಸ್ಪತ್ರೆಗೆ ದಾಖಲು!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

SCROLL FOR NEXT