ಟಿ.ಕೆ ಚತುನ್ನಿ 
ಕ್ರೀಡೆ

ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಟಿ.ಕೆ. ಚತುನ್ನಿ ವಿಧಿವಶ

ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊಚ್ಚಿ: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 7.45ರ ಸುಮಾರಿಗೆ ಕೊನೆಯುಸಿರೆಳೆದರು.

ಕೇರಳ ಮತ್ತು ಗೋವಾ ತಂಡದಲ್ಲಿ ಪ್ರತಿಷ್ಟಿತ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಪಂದ್ಯದಲ್ಲಿ ಗೋಲ್‌ಕೀಪರ್‌ ಆಗಿ ಆಟವಾಡಿದ್ದರು. ಭಾರತೀಯ ಫುಟ್‌ಬಾಲ್‌ನ ಅತ್ಯುತ್ತಮ ತರಬೇತುದಾರರಲ್ಲಿ ಒಬ್ಬರಾದ ಚತುನ್ನಿ ಅವರು 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಐ.ಎಂ.ವಿಜಯನ್, ಬ್ರೂನೊ ಕುಟಿನ್ಹೊ, ಜೊ ಪಾಲ್ ಅಂಚೇರಿ, ಸಿ.ವಿ.ಪಾಪ್ಪಚ್ಚನ್ ಹಾಗೂ ಉ.ಶರಫಾಲಿಯಂತಹ ಪ್ರಖ್ಯಾತ ಫುಟ್ ಬಾಲ್ ಕ್ರೀಡಾಪಟುಗಳು ಸೇರಿದಂತೆ ಅಸಂಖ್ಯಾತ ಪ್ರತಿಭಾವಂತ ಆಟಗಾರರನ್ನು ರೂಪಿಸಿದ ಹಿರಿಮೆ ಅವರದಾಗಿತ್ತು.

1979 ರಲ್ಲಿ ಅವರು ಕೇರಳದ ಸಂತೋಷ್ ಟ್ರೋಫಿ ತಂಡದ ತರಬೇತುದಾರರಾಗಿದ್ದರು. ಜತೆಗೆ ಮೋಹನ್ ಬಗಾನ್, ಡೆಂಪೊ ಗೋವಾ ಮತ್ತು ಎಫ್‌ಸಿ ಕೊಚ್ಚಿನ್ ಸೇರಿದಂತೆ ಹಲವಾರು ಪ್ರಸಿದ್ಧ ತಂಡಗಳಿಗೆ ತರಬೇತಿ ನೀಡಿದ್ದರು. ಚತುನ್ನಿ ಅವರು ‘ಫುಟ್ಬಾಲ್ ಮೈ ಸೋಲ್’ ಎಂಬ ಆತ್ಮಚರಿತ್ರೆಯನ್ನೂ ಬರೆದಿದ್ದಾರೆ. ಚತುನ್ನಿ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್‌ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT