ಅನುರಾಗ್ ಠಾಕೂರ್ 
ಕ್ರೀಡೆ

ಮಹಿಳಾ ಫುಟ್‌ಬಾಲ್ ಆಟಗಾರರ ಮೇಲೆ ಹಲ್ಲೆ: ಕಠಿಣ ಕಾನೂನು ಕ್ರಮಕ್ಕೆ ಅನುರಾಗ್ ಠಾಕೂರ್ ಆದೇಶ

ಗೋವಾದಲ್ಲಿ ನಡೆಯುತ್ತಿರುವ ಇಂಡಿಯನ್ ವುಮೆನ್ಸ್ ಲೀಗ್ ಟೂರ್ನಮೆಂಟ್‌ನಲ್ಲಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಸದಸ್ಯರಿಂದ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಮಹಿಳಾ ಫುಟ್‌ಬಾಲ್ ಆಟಗಾರರು ಆರೋಪಿಸಿದ್ದಾರೆ.

ನವದೆಹಲಿ: ಗೋವಾದಲ್ಲಿ ನಡೆಯುತ್ತಿರುವ ಇಂಡಿಯನ್ ವುಮೆನ್ಸ್ ಲೀಗ್ ಟೂರ್ನಮೆಂಟ್‌ನಲ್ಲಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಸದಸ್ಯರಿಂದ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಮಹಿಳಾ ಫುಟ್‌ಬಾಲ್ ಆಟಗಾರರು ಆರೋಪಿಸಿದ್ದಾರೆ.

ಇನ್ನೂ ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಎಐಎಫ್‌ಎಫ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಐಎಫ್‌ಎಫ್‌ಗೆ ಸೂಚಿಸಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ಇಂಡಿಯನ್ ವುಮೆನ್ಸ್ ಲೀಗ್‌ನಲ್ಲಿ ಮಹಿಳಾ ಫುಟ್‌ಬಾಲ್ ಆಟಗಾರರ ಮೇಲೆ ಅಧಿಕಾರಿಯೊಬ್ಬರು ನಡೆಸಿದ ದೈಹಿಕ ಹಲ್ಲೆಯನ್ನು ಕ್ರೀಡಾ ಸಚಿವಾಲಯವು ಗಂಭೀರವಾಗಿ ಪರಿಗಣಿಸಿದೆ.

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ತ್ವರಿತ ಕ್ರಮ ಕೈಗೊಳ್ಳಲು ಮತ್ತು ನಮ್ಮ ಫುಟ್ಬಾಲ್ ಆಟಗಾರರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ. ಎಐಎಫ್‌ಎಫ್‌ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಸಚಿವಾಲಯಕ್ಕೆ ತಿಳಿಸುವಂತೆ ನಿರ್ದೇಶನ ನೀಡಿದೆ. ಆಟಗಾರರ ಸುರಕ್ಷತೆ ಮತ್ತು ಭದ್ರತೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹಿಮಾಚಲ ಪ್ರದೇಶ ಮೂಲದ ಖಾಡ್ ಎಫ್‌ಸಿ ಕ್ಲಬ್‌ನ ಇಬ್ಬರು ಮಹಿಳಾ ಫುಟ್‌ಬಾಲ್ ಆಟಗಾರರು ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಕಾರ್ಯಕಾರಿ ಸಮಿತಿ ಸದಸ್ಯ ದೀಪಕ್ ಶರ್ಮಾ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಗೋವಾದಲ್ಲಿ ನಡೆಯುತ್ತಿರುವ ಇಂಡಿಯನ್ ವುಮೆನ್ಸ್ ಲೀಗ್ 2 ರ ಸಂದರ್ಭದಲ್ಲಿ ಶರ್ಮಾ ಹೋಟೆಲ್ ಕೋಣೆಯಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಫುಟ್ಬಾಲ್ ಆಟಗಾರರು ಶುಕ್ರವಾರ ಎಐಎಫ್‌ಎಫ್‌ಗೆ ದೂರು ಸಲ್ಲಿಸಿದ್ದರು, ಈ ಘಟನೆಯನ್ನು ಎನ್‌ಡಿಟಿವಿ ವರದಿ ಮಾಡಿದೆ. ಘಟನೆ ನಡೆದ ಸಂದರ್ಭದಲ್ಲಿ ಶರ್ಮಾ ಕುಡಿದಿದ್ದರು ಎಂದು ಫುಟ್‌ಬಾಲ್ ಆಟಗಾರರು ಆರೋಪಿಸಿದ್ದಾರೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT