ಬಜರಂಗ್ ಪುನಿಯಾ 
ಕ್ರೀಡೆ

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!

ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ನವದೆಹಲಿ: ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಆಯ್ಕೆ ಪ್ರಯೋಗಗಳಿಗೆ ತನ್ನ ಮೂತ್ರದ ಮಾದರಿಯನ್ನು ಒದಗಿಸಲು ಪುನಿಯಾ ವಿಫಲರಾಗಿದ್ದರು. ಇದರಿಂದಾಗಿ ಭವಿಷ್ಯದ ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅವರನ್ನು ಅಮಾನತುಗೊಳಿಸುವ ಆದೇಶವನ್ನು ನಾಡಾ(NADA) ಹೊರಡಿಸಿದೆ ಎಂದು ತಿಳಿದುಬಂದಿದೆ.

ನಾಡಾದ ಈ ಕ್ರಮದಿಂದಾಗಿ ಇದೇ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆ ಉಂಟುಮಾಡಿದೆ ಎಂದು ತಿಳಿದುಬಂದಿದೆ.

“ನಾಡಾ 2021 ರ ಆರ್ಟಿಕಲ್ 7.4 ರ ಪ್ರಕಾರ, ಈ ವಿಷಯದಲ್ಲಿ ವಿಚಾರಣೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಯಾವುದೇ ಸ್ಪರ್ಧೆ ಅಥವಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ಬಜರಂಗ್ ಪುನಿಯಾ ಅವರನ್ನು ತಕ್ಷಣವೇ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ನಾಡಾ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ನಾಡಾ ವಿರುದ್ಧವೇ ಗಂಭೀರ ಆರೋಪ ಮಾಡಿದ್ದ ಕುಸ್ತಿಪಟು

ಕೆಲವು ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ)) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದರು. ಜತೆಗೆ ಸಾಕ್ಷ್ಯ ಸಮೇತವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದರು.

ನಾಡಾದ ಅಧಿಕಾರಿಗಳು ಬಜರಂಗ್ ಪುನಿಯಾ ಅವರ ಪರೀಕ್ಷೆಗಾಗಿ ಬಂದ ವೇಳೆ ಅವರ ಬಳಿಯಿದ್ದ ಉಪಕರಣಗಳು ಸಿರಿಂಜ್ ಮತ್ತು ಬಾಟಲಿಗಳನ್ನು ಬಜರಂಗ್ ಪರೀಕ್ಷಿಸಿದ್ದರು. ಈ ವೇಳೆ ಇವುಗಳೆಲ್ಲ ಅವಧಿ ಮೀರಿದ ಮತ್ತು ಹಳೆಯ ಉಪಕರಣ ಎನ್ನುವುದು ಬೆಳಕಿಗೆ ಬಂದಿತ್ತು. ತಕ್ಷಣ ಬಜರಂಗ್ ಇದನ್ನೆಲ್ಲ ವಿಡಿಯೊ ಮಾಡಿ ತಮ್ಮ ಟ್ವಿಟರ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಜತೆಗೆ ಕಳವಳ ಕೂಡ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT