ಹರ್ವಿಂದರ್ ಸಿಂಗ್ 
ಕ್ರೀಡೆ

Paralympics 2024: ಇತಿಹಾಸ ಬರೆದ Harvinder Singh, ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ!

ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್‌ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳ ಅಮೋಘ ಪ್ರದರ್ಶನ ಮುಂದುವರೆದಿದ್ದು, ಆರ್ಚರಿಯಲ್ಲಿ ಭಾರತದ ಅಥ್ಲೀಟ್ ಹರ್ವಿಂದರ್ ಸಿಂಗ್ ಫೈನಲ್ ನಲ್ಲಿ ಅಗ್ರ ಸ್ಥಾನ ಪಡೆದು ಚಿನ್ನದ ಪದಕ ಸಾಧನೆ ಮಾಡಿದ್ದಾರೆ.

ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್‌ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಪಡೆದು ಭರವಸೆ ಮೂಡಿಸಿದ್ದ ಆರ್ಚರಿ ಅಥ್ಲೀಟ್‌ ಹರ್ವಿಂದರ್‌ ಸಿಂಗ್‌ ಸ್ಥಿರ ಪ್ರದರ್ಶನ ನೀಡಿದ್ದಾರೆ.

ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಆರ್ಚರಿಯಲ್ಲಿ ಮೊದಲ ಚಿನ್ನ

ಈ ಮೂಲಕ ಭಾರತ ಪ್ಯಾರಿಸ್ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಆರ್ಚರಿಯಲ್ಲಿ ಮೊದಲ ಬಂಗಾರದ ಸಾಧನೆಯನ್ನು ಮಾಡಿದೆ. ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಹರ್ವಿಂದರ್ ಸಿಂಗ್‌, ಪೋಲೆಂಡ್‌ನ ಲುಕಾಸ್ ಸಿಸ್ಜೆಕ್ ಆಟಗಾರನನ್ನು ಸೋಲಿಸಿದರು. ಪದಕದ ಸುತ್ತಿನ ಪಂದ್ಯದಲ್ಲಿ ಹರ್ವಿಂದರ್ 28-24, 28-27, 29-25 ರಿಂದ ಪೋಲೆಂಡ್‌ ಆಟಗಾರನನ್ನು ಮಣಿಸಿ, 6-0ಯಿಂದ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಭಾರತಕ್ಕೆ 22 ಪದಕ

ಹರ್ವಿಂದರ್ ಸಿಂಗ್ ಆರ್ಚರಿಯಲ್ಲಿ ಚಿನ್ನದ ಪದಕವನ್ನು ಗೆಲ್ಲುವುದರೊಂದಿಗೆ, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತವು 22 ಪದಕಗಳನ್ನು ಪಡೆದು ದಾಖಲೆ ಬರೆದಿದೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಇದುವರೆಗಿನ ಭಾರತದ ಅತ್ಯುತ್ತಮ ಪ್ರದರ್ಶನ ಇದಾಗಿದೆ. ಭಾರತ 4 ಚಿನ್ನ, 8 ಬೆಳ್ಳಿ ಹಾಗೂ 10 ಕಂಚು ಗೆದ್ದಿದ್ದು ಈ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT