ಹರ್ವಿಂದರ್ ಸಿಂಗ್ 
ಕ್ರೀಡೆ

Paralympics 2024: ಇತಿಹಾಸ ಬರೆದ Harvinder Singh, ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ!

ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್‌ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳ ಅಮೋಘ ಪ್ರದರ್ಶನ ಮುಂದುವರೆದಿದ್ದು, ಆರ್ಚರಿಯಲ್ಲಿ ಭಾರತದ ಅಥ್ಲೀಟ್ ಹರ್ವಿಂದರ್ ಸಿಂಗ್ ಫೈನಲ್ ನಲ್ಲಿ ಅಗ್ರ ಸ್ಥಾನ ಪಡೆದು ಚಿನ್ನದ ಪದಕ ಸಾಧನೆ ಮಾಡಿದ್ದಾರೆ.

ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್‌ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಪಡೆದು ಭರವಸೆ ಮೂಡಿಸಿದ್ದ ಆರ್ಚರಿ ಅಥ್ಲೀಟ್‌ ಹರ್ವಿಂದರ್‌ ಸಿಂಗ್‌ ಸ್ಥಿರ ಪ್ರದರ್ಶನ ನೀಡಿದ್ದಾರೆ.

ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಆರ್ಚರಿಯಲ್ಲಿ ಮೊದಲ ಚಿನ್ನ

ಈ ಮೂಲಕ ಭಾರತ ಪ್ಯಾರಿಸ್ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಆರ್ಚರಿಯಲ್ಲಿ ಮೊದಲ ಬಂಗಾರದ ಸಾಧನೆಯನ್ನು ಮಾಡಿದೆ. ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಹರ್ವಿಂದರ್ ಸಿಂಗ್‌, ಪೋಲೆಂಡ್‌ನ ಲುಕಾಸ್ ಸಿಸ್ಜೆಕ್ ಆಟಗಾರನನ್ನು ಸೋಲಿಸಿದರು. ಪದಕದ ಸುತ್ತಿನ ಪಂದ್ಯದಲ್ಲಿ ಹರ್ವಿಂದರ್ 28-24, 28-27, 29-25 ರಿಂದ ಪೋಲೆಂಡ್‌ ಆಟಗಾರನನ್ನು ಮಣಿಸಿ, 6-0ಯಿಂದ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಭಾರತಕ್ಕೆ 22 ಪದಕ

ಹರ್ವಿಂದರ್ ಸಿಂಗ್ ಆರ್ಚರಿಯಲ್ಲಿ ಚಿನ್ನದ ಪದಕವನ್ನು ಗೆಲ್ಲುವುದರೊಂದಿಗೆ, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತವು 22 ಪದಕಗಳನ್ನು ಪಡೆದು ದಾಖಲೆ ಬರೆದಿದೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಇದುವರೆಗಿನ ಭಾರತದ ಅತ್ಯುತ್ತಮ ಪ್ರದರ್ಶನ ಇದಾಗಿದೆ. ಭಾರತ 4 ಚಿನ್ನ, 8 ಬೆಳ್ಳಿ ಹಾಗೂ 10 ಕಂಚು ಗೆದ್ದಿದ್ದು ಈ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT