ರಣಧೀರ್ ಸಿಂಗ್ 
ಕ್ರೀಡೆ

ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಮೊದಲ ಭಾರತೀಯ ಅಧ್ಯಕ್ಷರಾಗಿ ರಣಧೀರ್ ಸಿಂಗ್ ಆಯ್ಕೆ

ಐದು ಬಾರಿ ಒಲಿಂಪಿಕ್ ಶೂಟರ್ ಆಗಿರುವ ರಣಧೀರ್, ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷ ಸ್ಥಾನಕ್ಕೆ ಏಕೈಕ ಅರ್ಹ ಅಭ್ಯರ್ಥಿಯಾಗಿದ್ದರು. ಅವರ ಅಧಿಕಾರವಧಿ 2024 ರಿಂದ 2028ರವರಗೆ ಇರಲಿದೆ.

ನವದೆಹಲಿ: ಹಿರಿಯ ಕ್ರೀಡಾ ಆಡಳಿತಗಾರ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ (OCA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

OCA 44ನೇ ಸಾಮಾನ್ಯ ಸಭೆಯಲ್ಲಿ ರಣಧೀರ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಹುದ್ದೆಗೇರಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

ಐದು ಬಾರಿ ಒಲಿಂಪಿಕ್ ಶೂಟರ್ ಆಗಿರುವ ರಣಧೀರ್, ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷ ಸ್ಥಾನಕ್ಕೆ ಏಕೈಕ ಅರ್ಹ ಅಭ್ಯರ್ಥಿಯಾಗಿದ್ದರು. ಅವರ ಅಧಿಕಾರವಧಿ 2024 ರಿಂದ 2028ರವರಗೆ ಇರಲಿದೆ.

77 ವರ್ಷದ ರಣಧೀರ್, 2021 ರಿಂದ ಒಸಿಎ ಹಂಗಾಮಿ ಅಧ್ಯಕ್ಷರಾಗಿದ್ದರು. ಇದಕ್ಕೂ ಮುನ್ನ ಅಧ್ಯಕ್ಷರಾಗಿದ್ದ ಕುವೈತ್ ನ ಶೇಖ್ ಅಹ್ಮದ್ ಅಲ್ -ಫಹಾದ್ -ಅಲ್ -ಸಬಾಹ್ ಅವರನ್ನು ನೈತಿಕ ನಿಯಮಗಳ ಉಲ್ಲಂಘನೆ ಆರೋಪದಲ್ಲಿ ಮುಂದಿನ 15 ವರ್ಷಗಳ ಕಾಲ ಯಾವುದೇ ಕ್ರೀಡಾ ಆಡಳಿತದ ಹುದ್ದೆ ವಹಿಸಿಕೊಳ್ಳದಂತೆ ಈ ವರ್ಷದ ಮೇ ತಿಂಗಳಲ್ಲಿ ನಿಷೇಧ ವಿಧಿಸಲಾಗಿತ್ತು.

ಭಾರತೀಯ ಮತ್ತು ಏಷ್ಯನ್ ಕ್ರೀಡಾ ಸಂಸ್ಥೆಗಳಲ್ಲಿ ವಿವಿಧ ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿರುವ ರಣಧೀರ್ ಅವರನ್ನು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಏಷ್ಯಾದ ಎಲ್ಲಾ 45 ದೇಶಗಳ ಉನ್ನತ ಕ್ರೀಡಾ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಒಸಿಎ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಪಟಿಯಾಲ ಮೂಲದ ರಣಧೀರ್ ಕ್ರೀಡಾಪಟುಗಳ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಅವರ ಚಿಕ್ಕಪ್ಪ, ಮಹಾರಾಜ ಯಾದವೀಂದ್ರ ಸಿಂಗ್, ಭಾರತಕ್ಕಾಗಿ ಟೆಸ್ಟ್ ಕ್ರಿಕೆಟ್ ಆಡಿದ್ದರು ಮತ್ತು ಐಒಸಿ ಸದಸ್ಯರಾಗಿದ್ದರು. ಅವರ ತಂದೆ ಭಲೀಂದ್ರ ಸಿಂಗ್ ಕೂಡ ಪ್ರಥಮ ದರ್ಜೆ ಕ್ರಿಕೆಟಿಗರಾಗಿದ್ದು, 1947 ಮತ್ತು 1992 ರ ನಡುವೆ ಐಒಸಿ ಸದಸ್ಯರಾಗಿದ್ದರು. ರಣಧೀರ್ 2001 ಮತ್ತು 2014 ರ ನಡುವೆ ಐಒಸಿ ಸದಸ್ಯರಾಗಿದ್ದರು. ನಂತರ ಅವರು ಐಒಸಿಯ ಗೌರವ ಸದಸ್ಯರಾಗಿ ಮುಂದುವರೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT