ಭಾರತ ಹಾಕಿ ತಂಡ PTI
ಕ್ರೀಡೆ

Asian Champions Trophy: ಮಲೇಷ್ಯಾವನ್ನು 8-1 ಗೋಲಿನಿಂದ ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ!

ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಗುರುವಾರ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ನಂತರ ಶನಿವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಲೀಗ್ ಪಂದ್ಯವನ್ನು ಆಡಲಿದೆ.

ನವದೆಹಲಿ: ಯುವ ಸ್ಟ್ರೈಕರ್ ರಾಜ್ ಕುಮಾರ್ ಪಾಲ್ ಅವರ ಹ್ಯಾಟ್ರಿಕ್ ಗೋಲಿನ ನೆರವಿನಿಂದ ಹಾಲಿ ಚಾಂಪಿಯನ್ ಭಾರತವು ಬುಧವಾರ ನಡೆದ ಹೀರೋ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಲೇಷ್ಯಾವನ್ನು 8-1 ಗೋಲುಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು. ಇದು ಟೂರ್ನಿಯಲ್ಲಿ ಭಾರತಕ್ಕೆ ಸತತ ಮೂರನೇ ಜಯವಾಗಿದೆ.

ಭಾರತದ ಪರ ರಾಜ್ ಕುಮಾರ್ (3, 25 ಮತ್ತು 33ನೇ ನಿಮಿಷ), ಅರಿಜಿತ್ ಸಿಂಗ್ ಹುಂಡಾಲ್ (6ನೇ, 39ನೇ ನಿಮಿಷ), ಜುಗರಾಜ್ ಸಿಂಗ್ (7ನೇ ನಿಮಿಷ), ನಾಯಕ ಹರ್ಮನ್‌ಪ್ರೀತ್ ಸಿಂಗ್ (22ನೇ ನಿಮಿಷ) ಮತ್ತು ಉತ್ತಮ್ ಸಿಂಗ್ (40ನೇ ನಿಮಿಷ) ಗೋಲು ಗಳಿಸಿದರು. ಮಲೇಷ್ಯಾ ಪರ ಅಖಿಮುಲ್ಲಾ ಅನ್ವರ್ (34ನೇ ನಿಮಿಷ) ಏಕೈಕ ಗೋಲು ದಾಖಲಿಸಿದರು. ಭಾರತ ಪ್ರಸ್ತುತ ಮೂರು ಗೆಲುವಿನಿಂದ ಒಂಬತ್ತು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಗುರುವಾರ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ನಂತರ ಶನಿವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಲೀಗ್ ಪಂದ್ಯವನ್ನು ಆಡಲಿದೆ. ಈ ಎರಡು ತಂಡಗಳ ನಡುವಿನ ಕೊನೆಯ ಪಂದ್ಯವು 2023ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಆಗಿತ್ತು. ಅಲ್ಲಿ ಭಾರತವು ವಿರಾಮದ ವೇಳೆಗೆ 1-3 ರಿಂದ ಹಿಂದುಳಿದಿತ್ತು. ಆ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಪುನರಾಗಮನ ಮಾಡಿ 4-3 ಅಂತರದಲ್ಲಿ ಗೆದ್ದು ಪ್ರಶಸ್ತಿ ಗೆದ್ದುಕೊಂಡಿತು.

ಮೊದಲ ಪಂದ್ಯದಲ್ಲಿ ಜಪಾನ್ ತಂಡವನ್ನು 2-1 ಗೋಲುಗಳಿಂದ ಸೋಲಿಸುವ ಮೂಲಕ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಹೆಚ್ಚಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT