ಸೈನಾ ನೆಹ್ವಾಲ್-ಪರುಪಳ್ಳಿ ಕಶ್ಯಪ್  
ಕ್ರೀಡೆ

Saina Nehwal-Kashyap Parupalli ದಂಪತಿ ವಿಚ್ಛೇದನ ನಿರ್ಧಾರ ವಾಪಸ್

ನಮ್ಮಿಬ್ಬರ ಸಂಬಂಧಕ್ಕೆ ಮತ್ತೊಂದು ಅವಕಾಶ ನೀಡುತ್ತಿದ್ದೇವೆ. ಒಟ್ಟಿಗೆ ಜೀವನ ಸಾಗಿಸಲು ನಾವು ಮತ್ತೆ ಪ್ರಯತ್ನಿಸುತ್ತೇವೆ.

ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದ ಭಾರತದ ಬ್ಯಾಡ್ಮಿಂಟನ್ ಲೋಕದ ತಾರಾ ದಂಪತಿ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ತಮ್ಮ ನಿರ್ಧಾರದಿಂದ ಹಿಂದೆ ಸರಿದು ಮತ್ತೆ ಒಂದಾಗಿ ಬಾಳಲು ನಿಶ್ಚಯಿಸಿದ್ದಾರೆ.

ನಮ್ಮಿಬ್ಬರ ಸಂಬಂಧಕ್ಕೆ ಮತ್ತೊಂದು ಅವಕಾಶ ನೀಡುತ್ತಿದ್ದೇವೆ. ಕೆಲವೊಮ್ಮೆ ದೂರವು ನಿಮಗೆ ಉಪಸ್ಥಿತಿಯ ಮೌಲ್ಯವನ್ನು ಕಲಿಸುತ್ತದೆ. ಒಟ್ಟಿಗೆ ಜೀವನ ಸಾಗಿಸಲು ನಾವು ಮತ್ತೆ ಪ್ರಯತ್ನಿಸುತ್ತೇವೆ ಎಂದು ಇಬ್ಬರೂ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡು ತಮ್ಮಿಬ್ಬರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಹೈದರಾಬಾದ್ ಅಕಾಡೆಮಿಯಲ್ಲಿ ಪುಲ್ಲೇಲ ಗೋಪಿಚಂದ್ ಅವರ ಅಡಿಯಲ್ಲಿ ತರಬೇತಿ ಪಡೆದಿದ್ದ ಈ ಜೋಡಿ ಪರಸ್ಪರ ಪ್ರೀತಿಸಿ ಡಿಸೆಂಬರ್ 2018 ರಲ್ಲಿ ವಿವಾಹವಾಗಿದ್ದರು. ಸೈನಾ ಅವರು ಅಧಿಕೃತವಾಗಿ ನಿವೃತ್ತಿ ಹೊಂದಿಲ್ಲವಾದರೂ, 38 ವರ್ಷದ ಪರುಪಳ್ಳಿ ಕಶ್ಯಪ್, ಕೋಚರ್ ಆಗಿ ಮತ್ತು ಗುರು ಸಾಯಿ ದತ್ ಸೇರಿದಂತೆ ಭಾರತದ ಸಿಂಗಲ್ಸ್ ಆಟಗಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ.

ವಿಚ್ಛೇದನ ಘೋಷಣೆ

ಹದಿನೈದು ದಿನಗಳ ಹಿಂದೆ, ಸೈನಾ ನೆಹ್ವಾಲ್ ತಮ್ಮ ಬೇರ್ಪಡುವಿಕೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಘೋಷಿಸುವ ಮೂಲಕ ಅಭಿಮಾನಿಗಳನ್ನು ಬೆರಗುಗೊಳಿಸಿದ್ದರು, ಜುಲೈ 14 ರಂದು ಹಂಚಿಕೊಂಡ ಅವರ ಹೇಳಿಕೆಯಲ್ಲಿ, ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಹೆಚ್ಚಿನ ಚಿಂತನೆ ಮತ್ತು ಪರಿಗಣನೆಯ ನಂತರ, ಪರುಪಳ್ಳಿ ಕಶ್ಯಪ್ ಮತ್ತು ನಾನು ಬೇರ್ಪಡಲು ನಿರ್ಧರಿಸಿದ್ದೇವೆ. ನಾವು ನಮಗಾಗಿ ಪರಸ್ಪರ ಶಾಂತಿ, ಬೆಳವಣಿಗೆಯನ್ನು ಆರಿಸಿಕೊಳ್ಳುತ್ತಿದ್ದೇವೆ. ಇಷ್ಟು ವರ್ಷದ ಸವಿ ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ. ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಅರ್ಥಮಾಡಿಕೊಂಡಿದ್ದಕ್ಕಾಗಿ ಮತ್ತು ಗೌರವಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದರು.

ವಿಶ್ವದ ಮಾಜಿ ಟಾಪ್-10 ಆಟಗಾರ ಪಾರುಪಳ್ಳಿ ಕಶ್ಯಪ್, 2014 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದರು ಮತ್ತು 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಪುರುಷ ಶಟ್ಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದರು. ಸೈನಾ ನೆಹ್ವಾಲ್ ಅವರನ್ನು ಭಾರತದ ಶ್ರೇಷ್ಠ ಕ್ರೀಡಾಪಟುಗಳಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ, ವಿಶ್ವದ ನಂ. 1 ಶ್ರೇಯಾಂಕವನ್ನು ಸಾಧಿಸಿದ ಮೊದಲ ಭಾರತೀಯ ಮಹಿಳೆ ಮತ್ತು ಲಂಡನ್ 2012 ರಲ್ಲಿ ಒಲಿಂಪಿಕ್ ಬ್ಯಾಡ್ಮಿಂಟನ್ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಸೇರಿದಂತೆ ವೃತ್ತಿಜೀವನದಲ್ಲಿ ಹಲವು ಪ್ರಥಮ ಸ್ಥಾನಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT