ಮೆಸ್ಸಿ 
ಕ್ರೀಡೆ

GOATS meet: ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ; ಭಾರಿ ಭದ್ರತೆ

ಮೆಸ್ಸಿ ಮತ್ತು ಅವರ ಪರಿವಾರವು ಇಂದು ಚಾಣಕ್ಯಪುರಿಯಲ್ಲಿರುವ ದಿ ಲೀಲಾ ಪ್ಯಾಲೇಸ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಅವರಿಗಾಗಿಯೇ ಸಂಪೂರ್ಣ ಒಂದು ಮಹಡಿಯನ್ನು ಕಾಯ್ದಿರಿಸಲಾಗಿದೆ.

ನವದೆಹಲಿ: ಮೂರು ದಿನಗಳ ಕಾಲ ಭಾರತ ಪ್ರವಾಸ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ 10:45ಕ್ಕೆ ದೆಹಲಿಗೆ ಆಗಮಿಸಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ.

ಮೆಸ್ಸಿ ಮತ್ತು ಅವರ ಪರಿವಾರವು ಇಂದು ಚಾಣಕ್ಯಪುರಿಯಲ್ಲಿರುವ ದಿ ಲೀಲಾ ಪ್ಯಾಲೇಸ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಅವರಿಗಾಗಿಯೇ ಸಂಪೂರ್ಣ ಒಂದು ಮಹಡಿಯನ್ನು ಕಾಯ್ದಿರಿಸಲಾಗಿದೆ. ಅರ್ಜೆಂಟೀನಾದ ಮೆಸ್ಸಿ ತಂಡಕ್ಕೆ ಹೋಟೆಲ್‌ನ ಪ್ರೆಸಿಡೆನ್ಸಿ ಸೂಟ್‌ಗಳನ್ನು ನೀಡಲಾಗಿದ್ದು, ಒಂದು ರಾತ್ರಿ ವಾಸ್ತವ್ಯಕ್ಕೆ 3.5 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ ಇರುತ್ತದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಮೆಸ್ಸಿಯ ವಾಸ್ತವ್ಯದ ಬಗ್ಗೆ ಯಾವುದೇ ವಿವರಗಳನ್ನು ಹಂಚಿಕೊಳ್ಳದಂತೆ ಹೋಟೆಲ್ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.

ಲೀಲಾಗೆ ಭಾರಿ ಭದ್ರತೆ

ವಿಮಾನ ನಿಲ್ದಾಣದಿಂದ ನೇರವಾಗಿ ಹೋಟೆಲ್‌ ಲೀಲಾ ಪ್ಯಾಲೇಸ್‌ಗೆ ಮೆಸ್ಸಿ ಆಗಮಿಸುತ್ತಿದ್ದು, ಕೋಲ್ಕತ್ತಾದಲ್ಲಿ ಅಭಿಮಾನಿಗಳ ದಾಂಧಲೆ ನಂತರ ದೆಹಲಿ ಹೋಟೆಲ್ ಸುತ್ತಲೂ ಭಾರಿ ಭದ್ರತೆ ಒದಗಿಸಲಾಗಿದೆ.

ಕೇವಲ ಹಸ್ತಲಾಘವಕ್ಕೆ ಕೋಟಿ ಕೋಟಿ!

ಆಯ್ದ ಕಾರ್ಪೊರೇಟ್ ಮತ್ತು ವಿಐಪಿ ಅತಿಥಿಗಳಿಗಾಗಿ ಹೋಟೆಲ್‌ನ ಪ್ರತ್ಯೇಕ ರೂಮ್ ನಲ್ಲಿ 'ಭೇಟಿ ಮತ್ತು ಶುಭಾಶಯ' ಕೋಟಿ ಕೋಟಿ ವೆಚ್ಚ ಮಾಡಲಾಗುತ್ತಿದೆ.

NDTV ಇನ್‌ಪುಟ್‌ಗಳ ಪ್ರಕಾರ, ಈ ವಿಶೇಷ ಸಂವಾದಕ್ಕೆ ಕೆಲವು ಕಾರ್ಪೊರೇಟ್‌ಗಳು ಫುಟ್‌ಬಾಲ್ ಐಕಾನ್ ಅನ್ನು ಭೇಟಿ ಮಾಡುವ ಅವಕಾಶಕ್ಕಾಗಿ 1 ಕೋಟಿ ರೂ.ವರೆಗೆ ಖರ್ಚು ಮಾಡುತ್ತಿವೆ ಎಂದು ವರದಿಯಾಗಿದೆ.

ಅತ್ಯಂತ ಉನ್ನತ ಮಟ್ಟದಲ್ಲಿ ಸಭೆಗಳು

ದೆಹಲಿಯಲ್ಲಿ ಅವರ ಸಂಕ್ಷಿಪ್ತ ಭೇಟಿಯ ಸಮಯದಲ್ಲಿ, ಮೆಸ್ಸಿ ಭಾರತದ ಮುಖ್ಯ ನ್ಯಾಯಾಧೀಶರು, ಹಲವಾರು ಸಂಸದರು ಮತ್ತು ಕ್ರಿಕೆಟಿಗರು ಹಾಗೂ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಪದಕ ವಿಜೇತರು ಸೇರಿದಂತೆ ಭಾರತೀಯ ಕ್ರೀಡಾ ತಾರೆಯರ ಆಯ್ದ ಗುಂಪನ್ನು ಭೇಟಿ ಮಾಡಲಿದ್ದಾರೆ.

ವಿಶ್ವ ಪುಟ್ ಬಾಲ್ ದಿಗ್ಗಜ ಲಿಯೋನಲ್ ಮೆಸ್ಸಿ ನಿನ್ನೆ ಮುಂಬೈನಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೊಲ್ಕರ್ ಹಾಗೂ ಭಾರತದ ಫುಟ್ ಬಾಲ್ ದಂತಕಥೆ ಸುನಿಲ್ ಚೆಟ್ರಿ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹಬ್ಬವನ್ನುಂಟು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್