ಮಣಿಕಾ ಬಾತ್ರಾ 
ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮಣಿಕಾ ಬಾತ್ರಾಗೆ ಪಿತೃವಿಯೋಗ: ಹೃದಯಾಘಾತದಿಂದ ತಂದೆ ಸಾವು!

ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರ ತಂದೆ ಗಿರೀಶ್ ಬಾತ್ರಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರ ತಂದೆ ಗಿರೀಶ್ ಬಾತ್ರಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದರ್ಪುರಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದ್ದು ಗುರುವಾರ ಪ್ರಾರ್ಥನಾ ಸಭೆ ನಿಗದಿಯಾಗಿದೆ. ಮಣಿಕಾ ಭಾರತದ ಅಗ್ರ ಮಹಿಳಾ ಸಿಂಗಲ್ಸ್ ಆಟಗಾರ್ತಿಯರಲ್ಲಿ ಒಬ್ಬರು. ಅವರು 2018 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಸಿಂಗಲ್ಸ್ ಮತ್ತು ಮಹಿಳಾ ತಂಡ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆದ್ದರು. ಅವರು ಮಹಿಳಾ ಡಬಲ್ಸ್‌ನಲ್ಲಿ ಬೆಳ್ಳಿ ಮತ್ತು ಮಿಶ್ರ ಡಬಲ್ಸ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು.

ಭಾರತದ ಅಗ್ರ ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಕಳೆದ ವರ್ಷ ಸೌದಿ ಸ್ಮ್ಯಾಶ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರ ವೃತ್ತಿಜೀವನದ ಅತ್ಯುತ್ತಮ ಸಿಂಗಲ್ಸ್ ಶ್ರೇಯಾಂಕ 24 ಅನ್ನು ತಲುಪಿದ್ದರು. ವಿಶ್ವ ಶ್ರೇಯಾಂಕದಲ್ಲಿ ಅಗ್ರ 25 ರೊಳಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಅವರು 15 ಸ್ಥಾನಗಳ ಲಾಂಗ್ ಜಂಪ್ ಮಾಡಿದ್ದರು. ಆದಾಗ್ಯೂ, ಅವರು ಪ್ರಸ್ತುತ ಮಹಿಳಾ ಸಿಂಗಲ್ಸ್‌ನಲ್ಲಿ 25ನೇ ಸ್ಥಾನದಲ್ಲಿದ್ದಾರೆ. ಆದರೆ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸಿಂಗಲ್ಸ್‌ನಲ್ಲಿ ಮಣಿಕಾ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ.

2020ರಲ್ಲಿ ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಯಿತು. ಅವರು 2022ರ ಏಷ್ಯಾ ಕಪ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು. 2024ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ತಂಡದೊಂದಿಗೆ ಕಂಚಿನ ಪದಕ ಗೆಲ್ಲಲು ಸಾಧ್ಯವಾಯಿತು. 2016ರ ಗುವಾಹಟಿ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಮಣಿಕಾ ಮಹಿಳಾ ತಂಡ, ಮಹಿಳಾ ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ಸ್ಪರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ನೇಪಾಳದಿಂದ ಭಾರತದ ವಿವಾದಿತ ಪ್ರದೇಶ ಒಳಗೊಂಡ ನಕ್ಷೆ ಇರುವ ಹೊಸ 100 ರೂ. ನೋಟು ಬಿಡುಗಡೆ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

SCROLL FOR NEXT